Advertisement

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

12:15 AM Apr 27, 2024 | Shreeram Nayak |

ಶಿವಮೊಗ್ಗ: ಬಿಜೆಪಿಯವರು ಧಾರ್ಮಿಕ ಭಾವನೆ ಕೆರಳಿಸುವ, ಧರ್ಮಗಳ ನಡುವೆ ಹಚ್ಚಿಕ್ಕುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿಯವರು, ಕಾಂಗ್ರೆಸ್‌ನವರು ಸಂಪತ್ತು ಹರಿದು ಹಂಚುತ್ತಾರೆ. ಮಂಗಳಸೂತ್ರ ಮಾರುತ್ತಾರೆ ಎಂಬ ಕೀಳು ಮನೋಭಾವದ ಮಾತುಗಳನ್ನಾಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಸೋಲಿನ ಭೀತಿಯಿಂದ ಈ ರೀತಿ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ನಮ್ಮ ಕಾರ್ಯಕರ್ತರು ಮತ್ತು ಮತದಾರರು ಉತ್ತರ ನೀಡುತ್ತಾರೆ. ಕೇಂದ್ರ ಸರಕಾರ ಸಾಮಾನ್ಯ ಜನರ ಜೀವನ ದುಸ್ತರವಾಗುವಂತೆ ಮಾಡಿದೆ.

ಬೆಲೆ ಏರಿಕೆಯಿಂದ ಜನ ಅವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಸತ್ಯ ಅರಿತ ಮೋದಿ ಹಿಂದೂ-ಮುಸ್ಲಿಂ ಎಂಬ ಧಾರ್ಮಿಕ ಭಾವನೆ ಕೆರಳಿಸುತ್ತಿದ್ದಾರೆ. ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಸುಳ್ಳು ಹೇಳುತ್ತಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next