Advertisement

FDA Scam: ಕಾನೂನು ಗೆಲ್ಲಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಮಧು ಬಂಗಾರಪ್ಪ

02:08 PM Nov 08, 2023 | Kavyashree |

ಶಿವಮೊಗ್ಗ: ರೈತರಿಗೆ ನೋಟೀಸ್ ಕೊಟ್ಟಿದ್ದಾರೆ. ಈ ಬಗ್ಗೆ ಲೀಡ್ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.ರೈತರು ತೆಗೆದುಕೊಂಡಿದ್ದು 10 ಲಕ್ಷದಷ್ಟು ಸಾಲ, ಬಡ್ಡಿ ಸೇರಿ‌ 1 ಕೋಟಿಯಷ್ಟು ಕಟ್ಟಬೇಕು ಅಂತಾ ನೋಟೀಸ್ ಕೊಟ್ಟಿದ್ದಾರೆ. ಒಂದೊಂದು ಬ್ಯಾಂಕಿನ ಸಾಲ ವ್ಯವಸ್ಥೆ ಒಂದೊಂದು ರೀತಿ ಇದೆ. ಯಾವುದು ಕಡಿಮೆ ಆಗುತ್ತದೋ ಆ ರೀತಿ ಮರುಪಾವತಿ ಮಾಡಲು ತಿಳಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ನಗರದಲ್ಲಿ ಮಾತನಾಡಿದರ ಅವರು,ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಸರಕಾರದ ತೀರ್ಮಾನ.ಸರಕಾರದಲ್ಲಿ ವರ್ಗಾವಣೆ ಮಾಡಿದ್ದಾರೆ ನಾನು ಸರಕಾರದಲ್ಲಿ ಇದ್ದೇನೆ ಇಲ್ಲ ಅಂತಾ ಹೇಳಕ್ಕೆ ಆಗುತ್ತಾದ?  ಅದೇನು ದೊಡ್ಡ ವಿಷಯ ಏನಲ್ಲ. ಅವರ ಮೇಲೆ ಹಗರಣಗಳ ಆರೋಪ ಬಂದಿತ್ತು.ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಿಯೋನಿಕ್ಸ್ ಹಗರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನನಗೆ ಮಾಹಿತಿ ಗೊತ್ತಿಲ್ಲ ಎಂದರು.

ಎಫ್ ಡಿಎ ಹಗರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಗೆಲ್ಲಬೇಕು, ನ್ಯಾಯಾಲಯ ಗೆಲ್ಲಬೇಕು ಅಷ್ಟೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಅದೇ ನನ್ನ ಅಭಿಪ್ರಾಯವೆಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲ್ಲ, ಉಸ್ತುವಾರಿ ಸಚಿವರು ಯಾರು ಗೊತ್ತಿಲ್ಲ ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ಅದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.

Advertisement

ಶರಾವತಿ ಸಂತ್ರಸ್ಥರ ಸಮಸ್ಯೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಪರಿಹರಿಸಲು ಪ್ರಯತ್ನ ನಡೆಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next