Advertisement

ಮಧು ಬಂಗಾರಪ್ಪ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಲಿ: ವಿಶ್ವನಾಥ್‌

11:15 PM Jun 25, 2019 | Team Udayavani |

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಬೇಕೆಂದು ಹಿರಿಯ ಮುಖಂಡ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದುಳಿದ ವರ್ಗದವರು ಪಕ್ಷದ ರಾಜ್ಯಾಧ್ಯಕ್ಷರಾದರೆ ಪಕ್ಷ ಸಂಘಟನೆಗೆ ಸಹಕಾರಿಯಾಗುತ್ತದೆ.

Advertisement

ಹೀಗಾಗಿ, ಮಧು ಬಂಗಾರಪ್ಪ ಅವರೇ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ. ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕವಾದರೆ ಹಿಂದಿನ ಅಧ್ಯಕ್ಷರು ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡುವುದು ವಾಡಿಕೆ. ಹೀಗಾಗಿ, ನಾನೇ ಹೊಸ ಅಧ್ಯಕ್ಷರಿಗೆ ಬಾವುಟ ಹಸ್ತಾಂತರ ಮಾಡಲಿದ್ದೇನೆ ಎಂದರು.

ಮಧು ಬಗ್ಗೆ ಒಲವು: ಈ ಮಧ್ಯೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ಅವರ ನೇಮಕಕ್ಕೆ ಪಕ್ಷದಲ್ಲಿ ಹೆಚ್ಚಿನ ಒಲವು ವ್ಯಕ್ತವಾಗಿದ್ದು, ಈ ಕುರಿತು ದೇವೇಗೌಡರು ಪಕ್ಷದ ನಾಯಕರ ಜತೆ ಸಮಾಲೋಚನೆ ಮಾಡಿದ್ದಾರೆ.

ಮಧು ಬಂಗಾರಪ್ಪ ಅವರು ಹಿಂದುಳಿದ ಈಡಿಗ ಸಮುದಾಯಕ್ಕೆ ಸೇರಿದ್ದು, ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಆವರ ಪುತ್ರರೂ ಆಗಿರುವುದರಿಂದ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next