Advertisement

ಬೆಳ್ತಂಗಡಿಗೆ ಮಧು ಬಂಗಾರಪ್ಪ ಭೇಟಿ: ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ

02:54 PM Jul 22, 2022 | Team Udayavani |

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷರಾದ ಮಧು ಬಂಗಾರಪ್ಪ ಅವರು ಬೆಳ್ತಂಗಡಿ ಕ್ಷೇತ್ರಕ್ಕೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು‌.

Advertisement

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತದಲ್ಲಿ ಪಾಲ್ಗೊಳ್ಳುವ ನಿಮಿತ್ತ ಮಂಗಳೂರಿನಿಂದ ಆಗಮಿಸಿದ್ದರು‌.

ದ.ಕ. ಕಾಂಗ್ರೆಸ್ ಉಸ್ತುವಾರಿಯಾಗಿರುವ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಮುಂದಿನ ಪಕ್ಷ ಬಲವರ್ಧನೆ ವಿಚಾರವಾಗಿ ಮುಂದಿನ ಕಾರ್ಯಯೋಜನೆ ಕುರಿತು ಹಿರಿಯರೊಂದಿಗೆ ಚರ್ಚಿಸಿದರು. ಬಳಿಕ ಕನ್ಯಾಡಿ ಶ್ರೀಗಳವರ ಪಾದಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದರು.

ಇದನ್ನೂ ಓದಿ: ರೆಸ್ಟೋರೆಂಟ್‌ನಲ್ಲಿ ‘ನೇಕೆಡ್ ಕ್ರೆಪ್’ ದೋಸೆ: ದುಬಾರಿ ಬೆಲೆಗೆ ಗ್ರಾಹಕರು ಕಂಗಾಲು!

Advertisement

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೆರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಶೈಲೇಶ್ ಕುಮಾರ್, ರಂಜನ್ ಗೌಡ, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯ ಡಿ‌. ಜಗದೀಶ್ ಹಾಗೂ ಪ್ರಮುಖ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next