Advertisement

ಮಧು ಪತ್ತಾರ್‌ ಸಾವಿನ ತನಿಖೆಗೆ ಒತ್ತಾಯ

11:37 AM Apr 21, 2019 | Team Udayavani |

ಬೆಂಗಳೂರು: ರಾಯಚೂರಿನ ವಿದ್ಯಾರ್ಥಿನಿ ಮಧು ಪತ್ತಾರ್‌ ಅನುಮಾನಾಸ್ಪದ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಆಲ್‌ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌), ಕಾಲೇಜು ವಿದ್ಯಾರ್ಥಿನಿಯರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಶನಿವಾರ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆಯಲ್ಲಿ ಮಾತನಾಡಿದ ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಶೋಭಾ ಎಸ್‌, ಮಧು ಪತ್ತಾರ್‌ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಹಾಕುವ ಕೆಲಸ ನಡೆಯುತ್ತಿದೆ. ಪ್ರಭಾವಿಗಳು ಪೋಷಕರ ಮೇಲೂ ಒತ್ತಡ ತಂದಿರುವ ಸಾಧ್ಯತೆ ಇದೆ. ಹೀಗಾಗಿ ಪುತ್ರಿ ಸಾವಿನ ಪ್ರಕರಣ ಕುರಿತು ಅವರೂ ಮುಕ್ತವಾಗಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.

ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆಯಾದರೂ, ಆರೋಪಿಗೆ ಸ್ಥಳೀಯ ರಾಜಕೀಯ ನಾಯಕರ ಬೆಂಬಲವಿದೆ. ಇದರಿಂದಲ್ಲೇ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಮಧು ಕುಟುಂಬದವರಿಗೆ ಧೈರ್ಯ ತುಂಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next