Advertisement

ಮಧು ವನ್ಯಜೀವಿ ಛಾಯಾಚಿತ್ರಕ್ಕೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

07:40 AM Aug 18, 2017 | Team Udayavani |

ಗುಂಡ್ಲುಪೇಟೆ: ದೆಹಲಿಯ ಜೆ.ಸಿ.ಎಂ ಛಾಯಾಗ್ರಹಣ ಸಂಸ್ಥೆಯ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಹಣ ಸ್ಪರ್ಧೆಯ ಸರಣಿಯಲ್ಲಿ ಪಟ್ಟಣದ ವನ್ಯಜೀವಿ ಛಾಯಾಗ್ರಾಹಕ ಆರ್‌.ಕೆ.ಮಧು ಎರಡು ಪ್ರಶಸ್ತಿ ಪಡೆದುಕೊಂಡಿದ್ದಾರೆ. 

Advertisement

ಭಾರತವಲ್ಲದೇ ಅಮೆರಿಕಾ, ರಷ್ಯಾ, ಹಂಗೇರಿ, ಬೆಲ್ಜಿಯಂ, ಫ್ರಾನ್ಸ್‌, ಇಂಗ್ಲೆಂಡ್‌ ಸೇರಿ 21 ದೇಶದ 1000ಕ್ಕೂ ಹೆಚ್ಚು ಸ್ವರ್ಧಿಗಳ 6000 ಛಾಯಾಚಿತ್ರಗಳಲ್ಲಿ ಆರ್‌.ಕೆ.ಮಧು ಸೆರೆಹಿಡಿದ ವನ್ಯಜೀವಿ ಛಾಯಾಚಿತ್ರಗಳಿಗೆ ಬಹುಮಾನ ಬಂದಿವೆ. 

ಡಿಜಿಟಲ್‌ ಪ್ರೊಜೆಕ್ಷನ್‌ ವಿಭಾಗದಲ್ಲಿ ಇವರು ಸೆರೆಹಿಡಿದ ನೀಲಕಂಠ ಪಕ್ಷಿಯ ಚಿತ್ರ ಅತ್ಯುತ್ತಮ ಪಕ್ಷಿ ಛಾಯಾಚಿತ್ರ ಪ್ರಶಸ್ತಿ ಹಾಗೂ ಪ್ರಿಂಟ್‌ ವಿಭಾಗದಲ್ಲಿ ಬಂಡೀಪುರದಲ್ಲಿ ಸೆರೆಹಿಡಿದ ಜಿಂಕೆಯ ಮಿಲನ ಛಾಯಾಚಿತ್ರ ಅತ್ಯುತ್ತಮ ಸಸ್ತನಿ ಪ್ರಶಸ್ತಿ ಪಡೆದಿದೆ. ಇದು ಇವರಿಗೆ ದೊರೆತ 23ನೇ ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಚಿತ್ರ ಪ್ರಶಸ್ತಿಯಾಗಿದೆ. 

ಕಳೆದ 23ವರ್ಷಗಳಿಂದ ವನ್ಯಜೀವಿ ಛಾಯಾಗ್ರಹಣ ಮಾಡುತ್ತಿರುವ ಇವರು ಪ್ರಸ್ತುತ ನೀಲಗಿರಿ ಜೀವ ವೈವಿಧ್ಯತಾಣದ ಸಂಶೋಧನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next