Advertisement

ಮಧುಗಿರಿ: ವಿದ್ಯಾರ್ಥಿನಿ ನೇಣಿಗೆ ಶರಣು

10:23 AM Sep 08, 2022 | Team Udayavani |

ಮಧುಗಿರಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Advertisement

ಪಟ್ಟಣದ ದಂಡಿ ಮಾರಮ್ಮ ದೇವಸ್ಥಾನದ ಹಿಂಭಾಗ ಕಸಬಾ ಹೋಬಳಿ ಬಸವನಹಳ್ಳಿ ನಿವಾಸಿ ಅಶ್ವಿನಿ ಬಿನ್ ಹನುಮಂತರಾಯಪ್ಪ (20 ವ) ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿಗ್ರಿ ಓದುತಿದ್ದ ಅಶ್ವಿನಿ ನಿನ್ನೆ ಕಾಲೇಜಿಗೆ ತೆರಳಿದ್ದು, ಸಂಜೆಯಾದರೂ ಹಿಂತಿರುಗಿ ಮನೆಗೆ ಬಂದಿಲ್ಲ. ಮನೆಯರು ರಾತ್ರಿ ವರೆಗೂ ಹುಡುಕಾಡಿ ಬೆಳಿಗ್ಗೆ ದೂರು ಕೊಡಲು ನಿರ್ಧರಿಸಿದ್ದು, ಆ ಸಮಯದಲ್ಲೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಅಕ್ಕ ತಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರ ಬರೆದಿದ್ದು ಪತ್ತೆಯಾಗಿದೆ. ನಾನು ಕಷ್ಟ ಪಟ್ಟು ಕೂಲಿ ನಾಲಿ ಮಾಡಿ ಮಕ್ಕಳನ್ನು ಸಾಕಿದ್ದು, ನನ್ನ ಮಗಳು ಆತ್ಮಹತ್ಯೆ ಮಾಡುವ ಸ್ಥಿತಿ ಇಲ್ಲ ಎಂದು ತಂದೆ ಹನುಮಂತರಾಯಪ್ಪ ಕಣ್ಣೀರು ಹಾಕಿದ್ದಾರೆ. ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ಬಳಿಕವಷ್ಟೇ ಬಯಲಾಗಬೇಕಿದೆ. ಸ್ಥಳಕ್ಕೆ ಸಿಪಿಐ ಎಂ.ಎಸ್. ಸರ್ದಾರ್ ಭೇಟಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next