Advertisement

ಎಟಿಎಂನಲ್ಲಿ ಹಲ್ಲೆ ಪ್ರಕರಣ: ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷಗಳ ಜೈಲು ಶಿಕ್ಷೆ ಪ್ರಕಟ

04:45 PM Feb 02, 2021 | Mithun PG |

ಬೆಂಗಳೂರು: ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿಗೆ ನಗರದ 65ನೇ ಸೆಷನ್ಸ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ

Advertisement

ಎಂಟು ವರ್ಷಗಳ ಹಿಂದೆ ನಗರದ ಕಾರ್ಪೋರೇಶನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಧುಕರ್ ರೆಡ್ಡಿ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ. ಈ ಪ್ರಕರಣ ಸಂಬಂಧ ಸುದೀರ್ಘ  ವಿಚಾರಣೆ ನಡೆಸಿರುವ 6ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಅವರು ಸೋಮವಾರ( ಫೆ. 1 2021 ) ದೋಷಿ ಎಂದು ಘೋಷಿಸಿದ್ದರು.

ಪ್ರಕರಣ ಸಂಬಂಧ ಆರೋಪಿಯ ವಿರುದ್ಧ ತನಿಖಾಧಿಕಾರಿಗಳು ಸಾಕ್ಷ್ಯಾಧರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಅಂಶಗಳನ್ನು ಪರಿಗಣಿಸಿರುವ ನ್ಯಾಯಾಧೀಶರು ಆರೋಪಿಯನ್ನು ದೋಷಿ ಎಂದು ಘೋಷಿಸಿ ಇಂದು (ಫೆ. 2) 12 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರ ಎಂ.ವಿ ತ್ಯಾಗರಾಜ್ ವಾದ ಮಂಡಿಸಿದ್ದರು.

updating…

Advertisement

Udayavani is now on Telegram. Click here to join our channel and stay updated with the latest news.

Next