Advertisement

ಬೆಂಗಳೂರು;ಮಧುಕರ್ ಪಾರ್ಥಿವ ಶರೀರ ಅಂತಿಮ ದರ್ಶನ, ರಾತ್ರಿ ಹುಟ್ಟೂರಿಗೆ

08:54 AM Dec 29, 2018 | Sharanya Alva |

ಬೆಂಗಳೂರು:ಎಚ್ 1ಎನ್ 1ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ(47ವರ್ಷ) ಅವರ ಪಾರ್ಥಿವ ಶರೀರವನ್ನು ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ತರಲಾಗಿದ್ದು, ಯಲಹಂಕದ ಪೊಲೀಸ್ ತರಬೇತಿ ಕೇಂದ್ರದ ಮೈದಾನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Advertisement

ರಾತ್ರಿ 8ಗಂಟೆವರೆಗೂ ಯಲಹಂಕದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬಳಿಕ ಪಾರ್ಥಿವ ಶರೀರ ವಿಮಾನದ ಮೂಲಕ ಮಂಗಳೂರಿಗೆ ರವಾನಿಸಲಾಗುವುದು ಎಂದು ವರದಿ ತಿಳಿಸಿದೆ.

ಮಂಗಳೂರಿನಲ್ಲಿ ರಾತ್ರಿ 9.15ರಿಂದ 10.15ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾತ್ರಿಯೇ ಹುಟ್ಟೂರಾದ ಕುಂದಾಪುರ ತಾಲೂಕಿನ ಯಡಾಡಿಗೆ ಕೊಂಡೊಯ್ಯಲಾಗುತ್ತಿದ್ದು, ಭಾನುವಾರ 10ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ. ತಂದೆ, ತಾಯಿ ಸಮಾಧಿ ಪಕ್ಕದಲ್ಲೇ ಮಧುಕರ್ ಸಮಾಧಿ ಮಾಡಲು ನಿರ್ಧರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next