Advertisement

J.C Madhuswamy ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ: ಯಡಿಯೂರಪ್ಪ

08:20 PM Mar 22, 2024 | Team Udayavani |

ತುರುವೇಕೆರೆ: ಜೆ.ಸಿ.ಮಾಧುಸ್ವಾಮಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ವಷ್ಟಪಡಿಸಿದರು.

Advertisement

ತಮ್ಮ ಹಾಗೂ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಜೆ.ಸಿ.ಮಾಧುಸ್ವಾಮಿ ಜತೆ ಮಾಜಿ ಶಾಸಕ ಮಸಾಲೆ ಜಯರಾಂ ಅವರ ತೋಟದ ಮನೆಯಲ್ಲಿ ಶುಕ್ರವಾರ ಯಡಿಯೂರಪ್ಪ ಹಾಗೂ ಇತರ ಮುಖಂಡರು ಸಂಧಾನ ಸಭೆ ನಡೆಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಪಕ್ಷದ ಟಿಕೆಟ್‌ ನಾನು ಕೊಡಿಸಿಲ್ಲ. ಹೈಕಮಾಂಡ್‌ನಿಂದ ಟಿಕೆಟ್‌ ಪಡೆದಿದ್ದು, ಅದರಲ್ಲಿ ನನ್ನ ಪಾತ್ರ ಇಲ್ಲ. ಈ ನಿಟ್ಟಿನಲ್ಲಿ ಮಾಧುಸ್ವಾಮಿಯವರನ್ನು ಪಕ್ಷ ಬಿಡದಂತೆ ಮನವೊಲಿಸಿರುವುದಾಗಿ ತಿಳಿಸಿದರು.

ಪಕ್ಷದ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ ಮಾಡುವುದು ಅವರಿಗೆ ಬಿಟ್ಟ ವಿಷಯ ಎಂದು ಯಡಿಯೂರಪ್ಪ ಈ ವೇಳೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next