Advertisement

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾನೂನು ಹಾಗೂ ಜಲ ಸಂಪನ್ಮೂಲ ಸಚಿವರಾದ ಮಧುಸ್ವಾಮಿ ಭೇಟಿ

01:50 PM Jan 29, 2022 | Team Udayavani |

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪ್ರವಾಸದಲ್ಲಿರುವ ಕಾನೂನು ಹಾಗೂ ಜಲಸಂಪನ್ಮೂಲ ಸಚಿವರಾದ ಜೆ.ಸಿ.ಮಧುಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದು ಬಳಿಕ ಧರ್ಮಸ್ಥಳ ಧರ್ಮಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ., ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೊನಪ್ಪ ಗೌಡ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಮಾಜಿ ತಾ.ಪಂ. ಸದಸ್ಯೆ ಧನಲಕ್ಷೀ ಜರ್ನಾಧನ್, ಜಲ ಸಂಪನ್ಮೂಲ ಅಧಿಕಾರಿಗಳು, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಬಳಿಕ ತಾಲೂಕಿನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next