Advertisement

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

01:49 AM May 06, 2024 | Team Udayavani |

ಭೋಪಾಲ್‌: ಮಧ್ಯಪ್ರದೇಶದ ಬಿನಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ನಿರ್ಮಲಾ ಸಪ್ರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ 3ನೇ ಎಂಎಲ್‌ಎ ಇವರಾಗಿದ್ದಾರೆ. ರವಿವಾರ ಸಿಎಂ ಮೋಹನ್‌ ಯಾದವ್‌ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ನಿರ್ಮಲಾ ಸಪ್ರ, ಚುನಾವಣೆ ವೇಳೆ ಕ್ಷೇತ್ರದ ಜನರಿಗೆ ಭರಪೂರ ಭರವಸೆ ನೀಡಿದ್ದು, ಕಾಂಗ್ರೆಸ್‌ ಅಧಿಕಾರದಲ್ಲಿ ಇಲ್ಲದ ಕಾರಣ ಅದನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಕಾಂಗ್ರೆಸ್‌ ಬಳಿ ಅಭಿವೃದ್ಧಿ ಅಜೆಂಡಾ ಇಲ್ಲ. ಹೀಗಾಗಿ ಬಿಜೆಪಿ ಸೇರ್ಪಡೆ ಆಗುತ್ತಿರುವುದಾಗಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next