Advertisement

ಪ್ರಧಾನಿ ಮೋದಿ 4 ಗಂಟೆಯ ಕಾರ್ಯಕ್ರಮಕ್ಕೆ 23 ಕೋಟಿ ರೂ ಖರ್ಚು ಮಾಡುತ್ತಿದೆ ಮ.ಪ್ರದೇಶ ಸರ್ಕಾರ!

09:21 AM Nov 13, 2021 | Team Udayavani |

ಭೋಪಾಲ್: ಮಧ್ಯಪ್ರದೇಶ ತನ್ನ ಬುಡಕಟ್ಟು ಜನರ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೋಪಾಲ್‌ ಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಭೋಪಾಲ್ ನಲ್ಲಿ ನಾಲ್ಕು ಗಂಟೆಗಳ ಕಾಲ ಮತ್ತು ವೇದಿಕೆಯಲ್ಲಿ 1 ಗಂಟೆ 15 ನಿಮಿಷಗಳ ಕಾಲ ಇರುತ್ತಾರೆ, ಇದಕ್ಕಾಗಿ ಐದು ಗುಮ್ಮಟಗಳನ್ನು ನಿರ್ಮಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ 23 ಕೋಟಿ ರೂ. ಗೂ ಹೆಚ್ಚು ವೆಚ್ಚ ಮಾಡುತ್ತಿದ್ದು, ಈ ಪೈಕಿ 13 ಕೋಟಿ ರೂ. ಜಾಂಬೂರಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜನರನ್ನು ಸಾಗಿಸಲು ವೆಚ್ಚ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement

ಭಗವಾನ್ ಬಿರ್ಸಾ ಮುಂಡಾ ಅವರ ಸ್ಮರಣಾರ್ಥ ಮಧ್ಯಪ್ರದೇಶವು ನವೆಂಬರ್ 15 ರಂದು ಜಂಜಾಟಿಯ ಗೌರವ್ ದಿವಸ್ ಅನ್ನು ಆಚರಿಸಲಿದೆ. ಪ್ರಧಾನಿ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಗರದ ಜಂಬೂರಿ ಮೈದಾನದಲ್ಲಿ ದೇಶದ ಮೊದಲ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಜಂಜಾಟಿಯ ಗೌರವ್ ದಿವಸ್‌ನ ಅಂಗವಾಗಿ, ಬಿರ್ಸಾ ಮುಂಡಾ ಮತ್ತು ಇತರ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಸ್ಮರಿಸಲು ನವೆಂಬರ್ 15 ರಿಂದ 22 ರವರೆಗೆ ರಾಷ್ಟ್ರೀಯವಾಗಿ ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಇದನ್ನೂ ಓದಿ:ಪ್ರಮುಖ ಮಾವೋವಾದಿ ನಾಯಕ ಕಿಶನ್ ದಾ ಮತ್ತು ಪತ್ನಿ ಶೀಲಾ ಬಂಧನ

ಜಾಂಬೂರಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಆದಿವಾಸಿಗಳು ಭಾಗವಹಿಸುವ ಸಾಧ್ಯತೆಯಿದೆ, ಇಡೀ ಮೈದಾನವನ್ನು ಬುಡಕಟ್ಟು ಕಲೆ ಮತ್ತು ಬುಡಕಟ್ಟು ದಿಗ್ಗಜರ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದು ವಾರದಿಂದ 300ಕ್ಕೂ ಹೆಚ್ಚು ಕಾರ್ಮಿಕರು ಈ ಕಾರ್ಯದಲ್ಲಿ ತೊಡಗಿದ್ದಾರೆ

Advertisement

52 ಜಿಲ್ಲೆಗಳಿಂದ ಬರುವ ಜನರಿಗೆ ಸಾರಿಗೆ, ಆಹಾರ ಮತ್ತು ವಸತಿಗಾಗಿ 12 ಕೋಟಿ ರೂ. ಮತ್ತು ಐದು ಗುಮ್ಮಟಗಳು, ಟೆಂಟ್‌ಗಳು, ಅಲಂಕಾರ ಮತ್ತು ಪ್ರಚಾರಕ್ಕಾಗಿ ರೂ. 9 ಕೋಟಿಗೂ ಹೆಚ್ಚು ವೆಚ್ಚವಾಗಿದೆ.

ಮಧ್ಯಪ್ರದೇಶ ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ 47 ಸ್ಥಾನಗಳನ್ನು ಮೀಸಲಿಡಲಾಗಿದೆ. 2008ರಲ್ಲಿ ಇದರಲ್ಲಿ ಬಿಜೆಪಿ 29 ಸ್ಥಾನಗಳನ್ನು ಗೆದ್ದಿತ್ತು; 2013 ರಲ್ಲಿ ಈ ಸಂಖ್ಯೆ 31 ರಷ್ಟು ಹೆಚ್ಚಾಗಿತ್ತು, ಆದರೆ 2018 ರಲ್ಲಿ 47 ಸ್ಥಾನಗಳಲ್ಲಿ ಬಿಜೆಪಿ ಕೇವಲ 16 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಸುಮಾರು 450 ಕೋಟಿ ರೂ ವೆಚ್ಚದಲ್ಲಿ ಪಿಪಿಪಿ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ನಿಲ್ದಾಣವು ಜರ್ಮನಿಯ ಹೈಡೆಲ್ಬರ್ಗ್ ರೈಲು ನಿಲ್ದಾಣದಂತೆಯೇ ಇದೆ. ನಿಲ್ದಾಣದ ನವೀಕರಣವನ್ನು ಜುಲೈ 2016 ರಲ್ಲಿ ಪ್ರಾರಂಭಿಸಲಾಯಿತು ಮತ್ತು ಮೂರು ವರ್ಷಗಳ ಗಡುವಿನೊಂದಿಗೆ 2017 ರಲ್ಲಿ ಕೆಲಸ ಪ್ರಾರಂಭವಾಯಿತು. ಈ ಆಧುನಿಕ ನಿಲ್ದಾಣವು ಆಗಮನ ಮತ್ತು ನಿರ್ಗಮನದ ಆಧಾರದ ಮೇಲೆ ಪ್ರಯಾಣಿಕರನ್ನು ಪ್ರತ್ಯೇಕಿಸುವುದು, ಪ್ಲಾಟ್‌ಫಾರ್ಮ್‌ಗಳು, ಲಾಂಜ್‌ಗಳು, ಕಾನ್‌ಕೋರ್ಸ್ ಮತ್ತು ಡಾರ್ಮಿಟರಿಗಳು ಮತ್ತು ವಿಶ್ರಾಂತಿ ಕೊಠಡಿಗಳಲ್ಲಿ ಸಾಕಷ್ಟು ಕುಳಿತುಕೊಳ್ಳುವ ವ್ಯವಸ್ಥೆಗಳಂತಹ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next