Advertisement

ಜೂ. 8ರಂದು ಮೋದಿ ಗುರುವಾಯೂರಿಗೆ

12:20 AM Jun 02, 2019 | mahesh |

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ಕೇರಳಕ್ಕೆ ಭೇಟಿ ನೀಡಲಿದ್ದು, ಜೂ. 8ರಂದು ಗುರುವಾಯೂರಿನ ಶ್ರೀ ಕೃಷ್ಣ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಸತತ ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ರಾಜ್ಯವೊಂದಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ದೇವಾಲಯದಲ್ಲಿ ಕನಿಷ್ಠ 45 ನಿಮಿಷಗಳ ಕಾಲ ಅವರು ಕಾಲ ಕಳೆಯಲಿದ್ದಾರೆ ಎಂದು ದೇಗುಲದ ಮೂಲಗಳು ತಿಳಿಸಿವೆ.

Advertisement

ನಮಗೆ ಬಂದ ಮಾಹಿತಿಯ ಪ್ರಕಾರ, ಜೂ.8ರಂದು ಮಧ್ಯಾಹ್ನದ ವೇಳೆಗೆ ಪ್ರಧಾನಿ ಮೋದಿ ಅವರು ಶ್ರೀ ಕೃಷ್ಣ ದೇವಾಲ ಯಕ್ಕೆ ತಲುಪಲಿದ್ದು, “ಉತ್ಛಪೂಜೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಅವರೊಂದಿಗೆ ಬೇರೆ ಸಚಿವರು ಆಗಮಿಸುತ್ತಾರಾ ಎಂಬ ಬಗ್ಗೆ ಮಾಹಿತಿಯಿಲ್ಲ ಎಂದು ಗುರುವಾಯೂರು ದೇವಸ್ವಂ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅಂದು ಬೆಳಗ್ಗೆ 11.30ಕ್ಕೆ ಕೇರಳ ತಲುಪಲಿದ್ದು, ಸಂಜೆ 4ರ ವೇಳೆಗೆ ದೆಹಲಿಗೆ ವಾಪಸಾಗಲಿದ್ದಾರೆ. ದೇವಸ್ಥಾನ ಭೇಟಿ ಹೊರತುಪಡಿಸಿ ಬೇರೆ ಯಾವುದೇ ಅಧಿಕೃತ ಕಾರ್ಯಕ್ರಮ ನಿಯೋಜನೆಯಾಗಿಲ್ಲ ಎಂದೂ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next