Advertisement

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

11:56 PM May 03, 2024 | Team Udayavani |

ಮಡಿಕೇರಿ: ಸಿಡಿಲು ಬಡಿದು ಅಸ್ಸಾಂ ಮೂಲದ ತೋಟ ಕಾರ್ಮಿಕ ನೋರ್ವ ಮೃತಪಟ್ಟ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.

Advertisement

ಅಸ್ಸಾಂ ಮೂಲದ ಪ್ರಮಾತ್ ಗರ್ಮಾನಿ(37) ಮೃತ ಕಾರ್ಮಿಕನಾಗಿದ್ದಾನೆ.ಬೆಟ್ಟಗೇರಿ ಕಾಫಿ ಬೆಳೆಗಾರರಾದ ಕುಟ್ಟಪ್ಪ ಅವರ ಲೈನ್ ಮನೆಯಲ್ಲಿ ವಾಸವಾಗಿದ್ದ ಕಾರ್ಮಿಕ ಶುಕ್ರವಾರ ಸಂಜೆ ಮಳೆ ಸುರಿಯುವ ಸಂದರ್ಭ ಮನೆಯಿಂದ ಹೊರ ಬಂದಿದ್ದ ವೇಳೆ ಸಿಡಿಲು ಬಡಿದಿದ್ದು,ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ತತ್ ಕ್ಷಣವೇ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next