Advertisement

Madikeri; ಬಸ್‌-ಸ್ಕೂಟಿ ಢಿಕ್ಕಿ: ಮಹಿಳೆ ಸಾವು

12:19 AM Jan 31, 2024 | Team Udayavani |

ಮಡಿಕೇರಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಸಂಭವಿಸಿದೆ. ಸಿದ್ದಾಪುರದ ಲಲಿತಾ (53) ಮೃತರು.

Advertisement

ಅತ್ತೂರು ಕಡೆಯಿಂದ ಗುಡ್ಡೆ ಹೊಸೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮೈಸೂರಿಗೆ ತೆರಳುತ್ತಿದ್ದ ಸರಕಾರಿ ಬಸ್‌ ನಡಿ ಸಿಲುಕಿದ ಪರಿಣಾಮ ಲಲಿತಾ ಸ್ಥಳದಲ್ಲೇ ಮೃತಪಟ್ಟರು.

ಸ್ಕೂಟಿ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಗಂಭೀರ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next