Advertisement

Madikeri: ಕಾರು ಅಪಘಾತ: ಮೆಕ್ಯಾನಿಕ್‌ ಸಾವು

01:14 AM Sep 05, 2023 | Team Udayavani |

ಮಡಿಕೇರಿ: ವಿದ್ಯುತ್‌ ಕಂಬ ಮತ್ತು ತಡೆಗೋಡೆಗೆ ಕಾರು ಢಿಕ್ಕಿಯಾದ ಪರಿಣಾಮ ಮೆಕ್ಯಾನಿಕ್‌ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

Advertisement

ನಗರದ ಗಣಪತಿ ಬೀದಿ ನಿವಾಸಿ ಭಾಸ್ಕರ್‌ (67) ಅವರು ಮೃತರು. ಈದ್ಗಾ ಮೈದಾನದ ಬಳಿಯ ರಸ್ತೆಯಲ್ಲಿ ಪಾದಚಾರಿಗಳಿಗೆ ಕಾರು ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ.

ಸ್ವತಃ ಕಾರು ಚಲಾಯಿಸುತ್ತಿದ್ದ ಭಾಸ್ಕರ್‌ ಅವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಜತೆಯಲ್ಲಿ ಪ್ರಯಾಣಿಸುತ್ತಿದ್ದ ಸುಂಟಿಕೊಪ್ಪದ ರವಿ ಪೂಜಾರಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ತೀವ್ರತೆಗೆ ವಿದ್ಯುತ್‌ ಕಂಬ ಮುರಿದು ಬಿದ್ದಿದೆ. ಘಟನ ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next