Advertisement

Madikeri: ವಿದ್ಯುತ್‌ ಸ್ಪರ್ಶದಿಂದ ಚೆಸ್ಕಾಂ ಸಿಬಂದಿ ಸಾವು

09:09 PM Sep 10, 2023 | Team Udayavani |

ಮಡಿಕೇರಿ: ವಿದ್ಯುತ್‌ ಸ್ಪರ್ಶಗೊಂಡು ಚೆಸ್ಕಾಂ ಸಿಬಂದಿಯೋರ್ವರು ಮೃತಪಟ್ಟಿರುವ ಘಟನೆ ವೀರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.

Advertisement

ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್‌ ತೆಗ್ಗಿ (27) ಮೃತಪಟ್ಟವರು.

ರವಿವಾರ ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಗೊಂಡಿದೆ. ಘಟನೆಯಿಂದ ಬಸವರಾಜ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವೀರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಬಸವರಾಜ್‌ ಅವರು ಕಳೆದ 5 ವರ್ಷಗಳಿಂದ ವೀರಾಜಪೇಟೆ ಚೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next