Advertisement

ಅಡಿಕೆ ಫಸಲಿನ ಮೇಲಿನ ಆಸೆ : ಇಬ್ಬರ ಕೊಲೆ, ಓರ್ವರ ಆತ್ಮಹತ್ಯೆಯಲ್ಲಿ ಅಂತ್ಯ

07:15 PM Oct 15, 2021 | Team Udayavani |

ಮಡಿಕೇರಿ : ದಾಯಾದಿ ಕಲಹವೊಂದು ಜೋಡಿ ಕೊಲೆ ಮತ್ತು ಆತ್ಮಹತ್ಯೆಯಲ್ಲಿ ಅಂತ್ಯವಾಗಿದ್ದು, ಅಡಿಕೆ ಫಸಲಿನ ಮೇಲಿನ ಆಸೆ ಮೂರು ಜೀವಗಳನ್ನು ಬಲಿ ತೆಗೆದುಕೊಂಡ ಘಟನೆ ದಕ್ಷಿಣ ಕೊಡಗಿನ ಕಿರಗೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Advertisement

ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದ ಅಲೆಮಾಡ ಕುಟುಂಬದ ಸೋಮಯ್ಯ ಸಾಗರ್(52) ಗುಂಡು ಹೊಡೆದು ಮಧು(42) ಹಾಗೂ ಯಶೋಧ ಎಂಬುವವರನ್ನು ಹತ್ಯೆ ಮಾಡಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಿರಗೂರು ಗ್ರಾಮದಲ್ಲಿರುವ ತೋಟದ ಅಡಿಕೆ ಫಸಲಿನ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಯ್ಯ ಸಾಗರ್ ಹಾಗೂ ಆತನ ಚಿಕ್ಕಪ್ಪನ ಮಗ ಮಧು ನಡುವೆ ಕಲಹ ಉಂಟಾಗಿತ್ತು. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದಾಗ ಸಾಗರ್ ಕೋವಿಯಿಂದ ಮಧುವಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಈ ಸಂದರ್ಭ ತಡೆಯಲು ಬಂದ ಸಾಗರ್ ಪತ್ನಿ ಯಶೋಧ ಅವರಿಗೂ ಗುಂಡೇಟು ತಗುಲಿದೆ.

ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಯಶೋಧ ತುರ್ತು ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ದುಷ್ಕೃತ್ಯವೆಸಗಿದ ಬಳಿಕ ಸಾಗರ್ ಮನೆ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

ಯಶೋಧ ಟಿ. ಶೆಟ್ಟಿಗೇರಿ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಗೋಣಿಕೊಪ್ಪ ವೃತ್ತ ನಿರೀಕ್ಷಕ ಜಯರಾಮ್ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾ ಎಸ್‌ಐ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಕೊಂಡಿದ್ದಾರೆ.

ಮಧು

Advertisement

Udayavani is now on Telegram. Click here to join our channel and stay updated with the latest news.

Next