Advertisement

Madikeri: ಲಾರಿ- ದ್ವಿಚಕ್ರ ವಾಹನ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06:15 PM Jul 16, 2024 | Team Udayavani |

ಮಡಿಕೇರಿ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಕೊಡಗರಹಳ್ಳಿ ಹೊಸಕೋಟೆ ನಡುವಿನ ಮಾರುತಿ ನಗರದ ತಿರುವಿನಲ್ಲಿ ನಡೆದಿದೆ.

Advertisement

ಜು.16ರ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಗರಗಂದೂರು ಗ್ರಾಮದ ಮಂಜು(25) ಹಾಗೂ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಗ್ರಾಮದ ರಕ್ಷಿತ್ (22) ಮೃತ ದುರ್ದೈವಿಗಳು.

ಮಂಜು ಹಾಗೂ ರಕ್ಷಿತ್ ಸುಂಟಿಕೊಪ್ಪದಿಂದ 7ನೇ ಹೊಸಕೋಟೆಗೆ ಊಟ ಮಾಡಿ ಬರಲೆಂದು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಕುಶಾಲನಗರದಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಹೇಳಲಾಗಿದೆ.

ಅಪಘಾತದ ಸಂದರ್ಭ ಇಬ್ಬರು ಹೆದ್ದಾರಿಗೆ ಬಿದಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ವಿಭಾಗದ ಸಬ್‌ಇನ್ಸ್ ಪೆಕ್ಟರ್ ಸ್ವಾಮಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next