Advertisement

ಮಡಿಕೇರಿ – ಮಂಗಳೂರು: ರಸ್ತೆ ಸಂಚಾರ ಬಂದ್‌, ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ

09:54 AM Jul 17, 2022 | Team Udayavani |

ಮಡಿಕೇರಿ: ನಗರದ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.

Advertisement

ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ತಡೆಗೋಡೆ ಕುಸಿಯುವ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ರಸ್ತೆ ಸೂಚಿಸಿದ್ದು, ಮಡಿಕೇರಿ – ಮಂಗಳೂರಿಗೆ ತೆರಳುವವರು ಹಾಗೂ ಮಡಿಕೇರಿ- ಮಂಗಳೂರಿನಿಂದ ಬರುವವರು ಮೇಕೆರಿ – ತಾಳತ್ತಮನೆ – ಅಪ್ಪಂಗಳ  ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ.

ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಮಂಗಳೂರು ರಸ್ತೆ ಬಂದ್ ಮಾಡಿದ ಸಂಚಾರಿ ಪೊಲೀಸರು. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗ ಬಂದ್ ಮಾಡಲಾಗಿದೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next