Advertisement

ಮಡಿಕೇರಿ-ಮಂಗಳೂರು ರಸ್ತೆ: ಲಘು ವಾಹನ ಸಂಚಾರಕ್ಕೆ ಮುಕ್ತ

11:43 PM Jul 27, 2022 | Team Udayavani |

ಮಡಿಕೇರಿ: ಕಳೆದ ಕೆಲವು ದಿನಗಳಿಂದ ವಾಹನ ಸಂಚಾರ ನಿಷೇಧಿಸಲ್ಪಟ್ಟಿದ್ದ ಮಡಿಕೇರಿ- ಮಂಗಳೂರು ರಾ. ಹೆ.275ರ ಮಡಿಕೇರಿ-ತಾಳತ್‌ಮನೆ ಜಂಕ್ಷನ್‌ವರೆಗಿನ ಮಾರ್ಗವನ್ನು ಇದೀಗ ಲಘುವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Advertisement

ಈ ಸಂಬಂಧ ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ. ಅದರಂತೆ ಮಡಿಕೇರಿಯ ಜನರಲ್‌ ತಿಮ್ಮಯ್ಯ ವೃತ್ತದಿಂದ ಜಿಲ್ಲಾಡಳಿತ ಭವನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ 7+1 ಸೀಟರ್‌ವರೆಗಿನ ವಾಹನಗಳು ದ್ವಿಮುಖವಾಗಿ ಸಂಚರಿಸಬಹುದಾಗಿದೆ.

ಉಳಿದಂತೆ 7+1 ಸೀಟರ್‌ಗಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನ ಗಳು ಮಂಗಳೂರು ಕಡೆಗೆ ಏಕಮುಖ ವಾಗಿ ಸಂಚರಿಸಬಹುದು. ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನಗಳು ಮಂಗಳೂರಿನಿಂದ ಮಡಿಕೇರಿ ಕಡೆಗೆ ಸಂಪಾಜೆ – ತಾಳತ್ತ ಮನೆ- ಮೇಕೇರಿ ಮಾರ್ಗವಾಗಿ ಏಕಮುಖವಾಗಿ ಸಂಚರಿಸ ಬಹುದೆಂದು ಆದೇಶದಲ್ಲಿ ತಿಳಿಸಲಾಗಿದೆ.

16.2 ಟನ್‌ ಒಳಪಟ್ಟ ಸರಕು ಸಾಗಣೆವಾಹನಗಳು, ಬಸ್‌ಗಳು, ಅನಿಲ, ರಸಗೊಬ್ಬರ ಹಾಗೂ ಇಂಧನ ಸಾಗಣೆ ವಾಹನಗಳು ಎರಡೂ ರಸ್ತೆ ಗಳಲ್ಲಿ ಏಕಮುಖವಾಗಿ ಸಂಚರಿಸಬಹು ದೆಂದು ಅವರು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next