ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Advertisement
ಅಂಗನವಾಡಿಗಳಿಗೆ 15 ದಿನದೊಳಗೆ ಸೂಕ್ತ ಜಾಗವನ್ನು ಗುರುತಿಸುವಂತೆ ಸರ್ವೆ ಅಧಿಕಾರಿ ಯವರೊಂದಿಗೆ ಸಮಾಲೋಚನೆ ಮಾಡಿ ಕಂದಾಯ ನಿರೀಕ್ಷಕರು ವರದಿ ನೀಡಿ ಜಾಗವನ್ನು ನೀಡುವಂತೆ ಕ್ರಮವಹಿಸಬೇಕು ಎಂದರು.
ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಾತನಾಡಿ, ಸಭೆಗೆ ಹೊಸದಾಗಿ ಕುಶಾಲನಗರದಲ್ಲಿ ಮಂಜೂರಾಗಿರುವ ಮೌಲನಾ ಅಬ್ದುಲ್ ಅಜಾದ್ ಶಾಲೆಗೆ ಜಾಗದ ಆವಶ್ಯಕತೆ ಬಗ್ಗೆ ಮಾಹಿತಿ ನೀಡಿದರು.
Related Articles
Advertisement
ಇದಕ್ಕೆ ಜಿಲ್ಲಾಧಿಕಾರಿ ಅವರು ಗೋಣಿಕೊಪ್ಪ, ವಿರಾಜಪೇಟೆ ವ್ಯಾಪ್ತಿಯಲ್ಲಿ ಸರಕಾರಿ ಜಾಗ ಸಿಗದಿದ್ದರೆ ಖಾಸಗಿಯವರಿಂದ ಖರೀದಿ ಮಾಡುವಂತೆ ಸೂಚಿಸಿದರು. ಐಟಿಡಿ ಇಲಾಖೆ ಅಧಿಕಾರಿ ಪ್ರಕಾಶ್ ಅವರು ದುಬಾರೆ, ಸಿದ್ದಾಪುರ, ತಿತಿಮತಿ ವ್ಯಾಪ್ತಿಯಲ್ಲಿ ಗಿರಿಜನ ಅಭಿವೃದ್ಧಿ ಯೋಜನೆಯಡಿ ಕುಡಿ ಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಜಾಗದ ಆವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ತಿಳಿಸಿದರು. ಗ್ರಾಮೀಣ ಗೃಹ ನಿರ್ಮಾಣದಲ್ಲಿ ಹಿಂದೆ ಉಳಿದಿದ್ದು, ಮೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಸೂಕ್ತ ಕ್ರಮಕೈಗೊಂಡು ವಸತಿ ರಹಿತ ಗ್ರಾಮೀಣ ಭಾಗದ ಜನರಿಗೆ ಸೌಲಭ್ಯ ನೀಡುವಂತೆ ಸೂಚಿಸಿದರು. ಕಸ ವಿಲೇವಾರಿಗೆ ಸೂಕ್ತ ಜಾಗವನ್ನು ನಿಗದಿಪಡಿಸಿ ವೈಜ್ಞಾನಿಕ ರೀತಿಯಲ್ಲಿ ಬಳಸಿ ಕೊಳ್ಳುವಂತೆ ಇದೇ ಸಂದರ್ಭ ದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾ ಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಬಿತ್ತನೆ ಪೂರ್ಣಗೊಂಡಿದ್ದು, ಭತ್ತದ ನಾಟಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಅವರು ಜಿಲ್ಲೆಯ ಕೆರೆಗಳ ಸರ್ವೆ ಕಾರ್ಯ ಶೀಘ್ರ ದಲ್ಲಿ ಪ್ರಾರಂಭಿಸುವಂತೆ ಸೂಚಿಸಿದರು.