Advertisement

Madikeri: ಕಾಫಿ ಮಂಡಳಿಯಿಂದ ಸಮೀಕ್ಷೆಗೆ ಸೂಚನೆ

12:24 AM Jan 15, 2024 | Team Udayavani |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಕಾಫಿ ಬೆಳೆ ನಷ್ಟವಾಗಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಕಾಫಿ ಮಂಡಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್‌.ಪೊನ್ನಣ್ಣ ಅವರು ತಿಳಿಸಿದ್ದಾರೆ.

Advertisement

ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ವಿರಾಜಪೇಟೆಯಲ್ಲಿ ಶಾಸಕರನ್ನು ಭೇಟಿಯಾಗಿ ಅಕಾಲಿಕ ಮಳೆಯಿಂದ ಉಂಟಾದ ಅಪಾರ ನಷ್ಟದ ಕುರಿತು ಮನವಿ ಪತ್ರದ ಮೂಲಕ ಮನವರಿಕೆ ಮಾಡಿದರು.

ಕಾಫಿ ಕೇಂದ್ರ ಸರಕಾರದ ವಾಣಿಜ್ಯ ಸಚಿವಾಲಯ ದಡಿಯಲ್ಲಿ ಬರುತ್ತಿದ್ದು, ಅಕಾಲಿಕ ಮಳೆಯಿಂದ ಉಂಟಾಗಿರುವ ಕಾಫಿ ಬೆಳೆಗಾರರ ಸಂಕಷ್ಟವನ್ನು ಕೇಂದ್ರವೇ ಪರಿಗಣನೆ ಮಾಡಬೇಕಾಗಿದೆ ಎಂದರು.

ಕೊಡಗು ಬೆಳೆಗಾರರ ಒಕ್ಕೂಟದ ನಿಯೋಗ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಬೆಳೆ ನಷ್ಟದ ಬಗ್ಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿತು.

Advertisement

Udayavani is now on Telegram. Click here to join our channel and stay updated with the latest news.

Next