Advertisement

Madikeri: ಭೂಮಾಫಿಯಾ ವಿರುದ್ಧ ಜನಜಾಗೃತಿ

11:22 PM Jul 24, 2024 | Team Udayavani |

ಮಡಿಕೇರಿ: ಸಿದ್ದಾಪುರದ ಕಾಫಿ ತೋಟ ಗಳು ಸಹಿತ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್‌ ಭೂಪರಿವರ್ತನೆ ಮತ್ತು ಭೂ ವಿಲೇವಾರಿ ಪ್ರಕ್ರಿಯೆಯನ್ನು ತತ್‌ಕ್ಷಣ ಸ್ಥಗಿತ ಗೊಳಿಸಬೇಕೆಂದು ಕೊಡವ ನ್ಯಾಷನಲ್‌ ಕೌನ್ಸಿಲ್‌ ಎನ್‌.ಯು.ನಾಚಪ್ಪ ಆಗ್ರಹಿಸಿದ್ದಾರೆ.

Advertisement

ಬೃಹತ್‌ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಸಿಎನ್‌ಸಿ ವತಿಯಿಂದ ವಿರಾಜಪೇಟೆ ಗಡಿಯಾರ ಕಂಬದ ಬಳಿ ಜರಗಿದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕೊಡವ ಲ್ಯಾಂಡ್‌ನ‌ ಸಂರಕ್ಷಣೆಗಾಗಿ ಸರ್ವ ಕೊಡವರು ಭೂಮಾಫಿಯಾದ ವಿರುದ್ಧ ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದರು.
ಖ್ಯಾತ ಅರ್ಥಶಾಸ್ತ್ರಜ್ಞ ಡಾ| ಸುಬ್ರಮಣಿಯನ್‌ ಸ್ವಾಮಿ ಅವರು ಕೊಡವರ ಪರ ನಡೆಸುತ್ತಿರುವ ಕಾನೂನು ಹೋರಾಟಕ್ಕೆ ವಿರುದ್ಧವಾಗಿ ಅರ್ಜಿ ಸಲ್ಲಿಸಲು ಕೆಲವು ಕೊಡವ ವಿರೋಧಿಗಳು ಷಡ್ಯಂತ್ರ ರೂಪಿಸಿದ್ದಾರೆ ಎಂದು ನಾಚಪ್ಪ ಆರೋಪಿಸಿದರು. ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next