Advertisement

Madikeri ನಿವೃತ್ತ ಯೋಧ ನಾಪತ್ತೆ; ಪಂಪಿನ ಕೆರೆಯಲ್ಲಿ ಶೋಧ

11:43 PM Nov 07, 2023 | Team Udayavani |

ಮಡಿಕೇರಿ: ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ನಗರದ ಉಕ್ಕುಡ ನಿವಾಸಿ ಸಂದೇಶ್‌ (38) ಅವರೇ ನಾಪತ್ತೆಯಾದ ಯೋಧ.

Advertisement

ಪತ್ರವೊಂದು ಸಿಕ್ಕಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನಗರದ ಪಂಪಿನ ಕೆರೆಯಲ್ಲಿ ನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬಂದಿ ಮಂಗಳವಾರ ತೀವ್ರ ಶೋಧ ಕಾರ್ಯ ನಡೆಸಿದರು.

ಕತ್ತಲಾದ ಹಿನ್ನೆಲೆ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಲಾಯಿತು. ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆಯಷ್ಟೇ ಭಾರತೀಯ ಸೇನೆಯಿಂದ ನಿವೃತ್ತಿಯಾಗಿದ್ದ ಸಂದೇಶ್‌ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next