Advertisement

ಮಡಿಕೇರಿ: ಪಾದಾಚಾರಿಗಳ ಮೇಲೆರಗುತ್ತಿರುವ ಬೀದಿ ನಾಯಿಗಳು: ಇಬ್ಬರಿಗೆ ಗಾಯ

01:35 PM Nov 03, 2021 | Team Udayavani |

ಮಡಿಕೇರಿ: ಮಡಿಕೇರಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ನಗರದ ಎಲ್ಲಾ ಬಡಾವಣೆಗಳಲ್ಲಿ 20 ರಿಂದ 30 ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿದ್ದು, ಆತಂಕವನ್ನು ಸೃಷ್ಟಿಸಿವೆ.

Advertisement

ಗಣಪತಿ ಬೀದಿಯಲ್ಲಿ ಮದರಸಕ್ಕೆ ತೆರಳುತ್ತಿದ್ದ 7 ವರ್ಷದ ಬಾಲಕನ ಮೇಲೆ ನಾಯಿಗಳ ಹಿಂಡು ದಾಳಿ ಮಾಡಿದೆ. ಕೈಗೆ ಕಚ್ಚಿದ ಪರಿಣಾಮ ತೀವ್ರ ರೀತಿಯ ಗಾಯಗಳಾಗಿದೆ.

ಕಾವೇರಿ ಹಾಲ್ ರಸ್ತೆಯಲ್ಲಿ ಗೂಡ್ಸ್ ಆಟೋ ಚಾಲಕರೊಬ್ಬರ ಮೇಲೆ ನಾಯಿಗಳು ದಾಳಿ ಮಾಡಿದ್ದು, ಗಾಯಗಳಾಗಿದೆ. ದ್ವಿಚಕ್ರ ವಾಹನ ಚಾಲಕರ ಮೇಲು ನಾಯಿಗಳ ದಾಳಿಯಾಗುತ್ತಿದ್ದು, ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.

ಕಳೆದ ಎರಡು ತಿಂಗಳಿನಿಂದ ಬೀದಿನಾಯಿಗಳ ಹಾವಳಿ ಬಗ್ಗೆ ನಗರಸಭೆಗೆ ದೂರು ನೀಡುತ್ತಿದ್ದರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next