Advertisement

Madikeri: ಪತ್ನಿಯನ್ನು ಕೊಂದು ಆತ್ಮಹತ್ಯೆ

12:11 AM Dec 20, 2023 | Team Udayavani |

ಮಡಿಕೇರಿ: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.

Advertisement

ನಂದಿನಿ ಕೊಲೆಯಾದ ಮಹಿಳೆಯಾಗಿದ್ದು, ಈಕೆಯ ಪತಿ ಪಣಿಯರವರ ಮಂಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಾಫಿ ತೋಟದ ಲೈನ್‌ ಮನೆಯೊಂದರಲ್ಲಿ ವಾಸವಾಗಿದ್ದ ದಂಪತಿ ನಡುವೆ ಮಕ್ಕಳಾಗದಿದ್ದ ಕಾರಣಕ್ಕೆ ಕಲಹ ನಡೆಯುತಿತ್ತು ಎನ್ನಲಾಗಿದೆ.

ಡಿ. 17ರಂದು ರಾತ್ರಿ ಮಂಜು ಮದ್ಯದ ಅಮಲಿನಲ್ಲಿ ಕಲಹ ನಡೆಸಿ ಪತ್ನಿ ನಂದಿನಿಯ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಲ್ಲೆಯಿಂದ ಪತ್ನಿ ಸಾವನ್ನಪ್ಪಿರುವುದನ್ನು ಅರಿತ ಮಂಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಶ್ರೀಮಂಗಲ ಪೊಲೀಸರು ಹಾಗೂ ಹಾಗೂ ಅಪರಾಧ ಕೃತ್ಯ ಪತ್ತೆ ಅಧಿಕಾರಿಗಳ ವಿಶೇಷ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next