Advertisement

Madikeri ಟ್ಯಾಂಕರ್‌-ಬೈಕ್‌ ಅಪಘಾತ: ಉಡುಪಿ ಮೂಲದ ವಿದ್ಯಾರ್ಥಿ ಸಾವು

12:37 AM Sep 21, 2023 | Team Udayavani |

ಮಡಿಕೇರಿ: ಹಾಲಿನ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಮಡಿಕೇರಿ ಮೆಡಿಕಲ್‌ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ, ಉಡುಪಿ ಮೂಲದ ವಿಜೇಶ್‌ ಮೃತಪಟ್ಟ ಘಟನೆ ಕಾಟಕೇರಿ ಬಳಿ ಸಂಭವಿಸಿದೆ.

Advertisement

ಬುಧವಾರ ಸಂಜೆ ಉಡುಪಿ ಯಿಂದ ವಿಜೇಶ್‌ ಮತ್ತು ಶಿವಾನಂದ್‌ ಎಂಬವರು ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್‌ ನಡುವೆ ಢಿಕ್ಕಿ ಸಂಭವಿಸಿದೆ.

ಪರಿಣಾಮ ಬೈಕ್‌ ಸವಾರ ವಿಜೇಶ್‌ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್‌ ಅವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಲಾರಿ ಸಹಿತ ಚಾಲಕನ ವಿರುದ್ದ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next