Advertisement

Madikeri; ಚೇಲಾವರ ಫಾಲ್ಸ್‌ನಲ್ಲಿ ಮುಳುಗಿ ಪ್ರವಾಸಿ ಸಾವು

11:03 PM Feb 04, 2024 | Team Udayavani |

ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್‌ನಲ್ಲಿ ರವಿವಾರ ಸಂಭವಿಸಿದೆ.

Advertisement

ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿ, ಮಹಮ್ಮದ್‌ ಅಶ್ರಫ್ ಅವರ ಪುತ್ರ ರಾಶೀದ್‌ (25) ಎಂದು ಗುರುತಿಸಲಾಗಿದೆ.

ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ರಾಶೀದ್‌, ಚೇಲಾವರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾದರು ಎಂದು ಹೇಳಲಾಗಿದೆ.

ಜಲಪಾತದಿಂದ ಮೃತದೇಹವನ್ನು ಮೇಲೆತ್ತು ವಲ್ಲಿ ಅಗ್ನಿಶಾಮಕ ದಳದ ಸಿಬಂದಿ ಯಶಸ್ವಿಯಾಗಿದ್ದು, ನಾಪೋಕ್ಲು ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್‌ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next