Advertisement

ಮಡಿಕೇರಿ: ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಬಾಲಕರು ನೀರುಪಾಲು

12:32 AM Feb 13, 2023 | Team Udayavani |

ಮಡಿಕೇರಿ: ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಶಾಲನಗರ ಬಳಿಯ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.

Advertisement

ಸ್ಥಳೀಯ ಬಾಲಕರಾದ ಪ್ರಥ್ವಿ (7) ಹಾಗೂ ಪ್ರಜ್ವಲ್‌ (4) ಮೃತಪಟ್ಟವರು.

ಗ್ರಾಮದ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಸಂದರ್ಭ ಇಬ್ಬರು ಆಕಸ್ಮಿಕವಾಗಿ ಮುಳುಗಿದ್ದಾರೆ. ಕೂಡ್ಲೂರು ನಿವಾಸಿ, ಕೂಲಿ ಕಾರ್ಮಿಕ ನಾಗರಾಜ್‌ ಅವರ ಪುತ್ರ ಪೃಥ್ವಿ ಹಾಗೂ ಆಟೋ ಚಾಲಕ ಸತೀಶ್‌ ಅವರ ಪುತ್ರ ಪ್ರಜ್ವಲ್‌ ಸಂಬಂಧದಲ್ಲಿ ಸಹೋದರರಾಗಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಗ್ನಿ ಶಾಮಕದಳದವರು ಮೃತದೇಹಗಳನ್ನು ಮೇಲೆತ್ತಿದರು.

Advertisement

Udayavani is now on Telegram. Click here to join our channel and stay updated with the latest news.

Next