Advertisement

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

12:25 AM Oct 05, 2024 | Team Udayavani |

ಮಡಿಕೇರಿ: ಕುಶಾಲನಗರದ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ವಿವಾದದಲ್ಲಿ ಓರ್ವನು ಇಬ್ಬರನ್ನು ಕೊಡಲಿಯಿಂದ ಕಡಿದು ಕೊಂದಿದ್ದು, ಆರೋಪಿಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಯ ಹಲ್ಲೆಯಿಂದ ಬಸವೇಶ್ವರ ಬಡಾವಣೆ ನಿವಾಸಿ ಜೋಸೆಫ್ (55) ಸ್ಥಳದಲ್ಲೇ ಮೃತಪಟ್ಟಿದ್ದು, ಸುಂದರನಗರ ನಿವಾಸಿ ವಸಂತ (46) ಅವರು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿ ಬಸವೇಶ್ವರ ಬಡಾವಣೆಯ ನಿವಾಸಿ ಗಿರೀಶ್‌(29)ನನ್ನು ಪೊಲೀಸರು ಬಂಧಿಸಿದ್ದಾರೆ.

ವೆಲ್ಡಿಂಗ್‌ ವೃತ್ತಿ ಮಾಡುತ್ತಿದ್ದ ಜೋಸೆಫ್ ಹಾಗೂ ವಸಂತ ಅವರು ಮನೆಯ ಬಳಿ ಇದ್ದಾಗ ಗಿರೀಶ್‌ ಬಂದು, ಈ ಹಿಂದೆ ಮಾಡಿದ ಕೆಲಸದ ಬಾಕಿ ಹಣ ನೀಡುವಂತೆ ಜೋಸೆಫ್ ಅವರಲ್ಲಿ ಕೇಳಿದ್ದ. ಅದಕ್ಕೆ, ತಾನು ಯಾವುದೇ ಹಣ ನೀಡಲು ಬಾಕಿ ಇರುವುದಿಲ್ಲ ಎಂದು ಜೋಸೆಫ್ ಹೇಳಿದಾಗ ಕೋಪಗೊಂಡ ಗಿರೀಶ್‌ ತನ್ನ ಮನೆಗೆ ಹೋಗಿ ಕೊಡಲಿ ತಂದು ಜೋಸೆಫ್ ಮೇಲೆ ಹಲ್ಲೆ ನಡೆಸಿದ್ದಾನೆ. ತಡೆಯಲು ಹೋದ ವಸಂತನ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌, ಸೋಮವಾರಪೇಟೆ ಡಿವೈಎಸ್‌ಪಿ ಆರ್‌.ವಿ.ಗಂಗಾಧರಪ್ಪ, ಕುಶಾಲನಗರ ಸಿಪಿಐ ರಾಜೇಶ್‌ ಕೆ., ಪಿಎಸ್‌ಐ ಮೋಹನ್‌ರಾಜು ಪಿ. ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆ ತಜ್ಞರ ತಂಡ ಭೇಟಿ ನೀಡಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದೆ.

Advertisement

Udayavani is now on Telegram. Click here to join our channel and stay updated with the latest news.

Next