Advertisement

25ರಂದು ಮಡಿವಾಳ ಮಾಚಿದೇವರ ಜಯಂತಿ

03:44 PM Feb 23, 2020 | Suhan S |

ಮಳವಳ್ಳಿ: ತಾಲೂಕು ಮಡಿವಾಳ ಮಾಚಿದೇವರ ಸಂಘದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವು ಫೆ.25ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಕುಮಾರ್‌ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಾಚಿದೇವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಮಾಚಿದೇವರ ದೇವಸ್ಥಾನದಿಂದ ಅಂಬೇಡ್ಕರ್‌ ಭವನದ ವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಕಾರ್ಯ ಕ್ರಮವನ್ನು ಶಾಸಕ ಡಾ.ಕೆ.ಅನ್ನದಾನಿ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಜೆಡಿಎಸ್‌ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ವಿ.ಅಮರ್‌ ನಾಥ್‌, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಹೀಗಾಗಿ ವಿವಿಧ ಸಂಘ ಸಂಸ್ಥೆಯ ಮುಖಂಡರು, ತಾಲೂಕು ಮಡಿವಾಳ ಮಾಚಿದೇವರ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದರು.

ತಾಲೂಕು ಮಡಿವಾಳ ಮಾಚಿದೇವರ ಸಂಘದ ಗೌರವ ಅಧ್ಯಕ್ಷ ಸಿದ್ದಪ್ಪಾಜಿ, ಕಾರ್ಯಾಧ್ಯಕ್ಷ ವೀರಭದ್ರಣ್ಣ, ಉಪಾಧ್ಯಕ್ಷ ಗಣೇಶ್‌ ಕರಳಕಟ್ಟೆ, ವಿಶಾಲಕ್ಷ್ಮಮ್ಮ, ಖಜಾಂಚಿ ತಳಗವಾದಿ ನಿಂಗರಾಜು, ರೇವಣ್ಣ, ಕೆಇಬಿ ನಾಗರಾಜು, ರಮೇಶ್‌ ಮಹದೇವು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next