Advertisement
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ತಾಪಂ ಸದಸ್ಯ ಕೆ.ಎಚ್. ಶಿವರಾಜು ಮನವಿಗೆ ಪ್ರತೀಕ್ರಿಯಿಸಿದ ಅವರು, ರಾಜ್ಯದ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಂಜಾಗ್ರತೆ ಅನುಸರಿ ಜನರಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಭೆ ಯಲ್ಲಿ ಹಾಜರಿದ್ದ ವೈದ್ಯರಿಗೆ ತಿಳಿಸಿದರು.
Related Articles
Advertisement
ಸಿಡಿಪಿಒ ಸುರೇಂದ್ರ ಮಾತನಾಡಿ, ದೊಡ್ಡಸೋಮನಹಳ್ಳಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಸಂಪೂರ್ಣ ಶಿಥಿಲಗೊಂಡಿದ್ದು, ಅದನ್ನು ಪಂಚಾಯ್ತಿ ತೆರವುಗೊಳಿಸಿಕೊಟ್ಟರೆ, ನೂತನ ಅಂಗನವಾಡಿ ಕಟ್ಟಡ ಕಟ್ಟಿಸಲಾಗುವುದು. ಈ ಸಂಬಂಧ ಈಗಾಗಲೇ ಅನುದಾನ ಮೀಸಲಿಟ್ಟಿದ್ದೇವೆ. ಮಾತೃ ವಂದನಾ, ಮಾತೃಸ್ತ್ರೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ 17 ಮಂದಿ ಪಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಸಮೃದ್ಧಿ ಯೋಜನೆಯ ಹಣ ಪಾವತಿಸಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.
ಪಶುಭಾಗ್ಯ ಪಲಾನುಭವಿಗಳ ಆಯ್ಕೆ: ಪಶು ಸಂಗೋಪನಾ ಇಲಾಖೆಯ ಸಹಾಯ ಕನಿರ್ದೇಶಕ ಜನಾರ್ಧನ್ ಮಾತನಾಡಿ, ಪಶು ಭಾಗ್ಯ ಯೋಜನೆಯಡಿ ತಾಲೂಕಿನಲ್ಲಿ ಪಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ನೊಂದಾಯಸಿಕೊಂಡಿರುವ ಕೆಲ ಪಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವುದಿಲ್ಲ ಎಂದು ವಾಪಸ್ಸಾಗಿಸಿದ್ದಾರೆ. ಅಂತವರ ದಾಖಲೆಗಳನ್ನು ವಿಎಸ್ಎಸ್ಎನ್ಗೆ ವರ್ಗಾಯಿಸಿ ಸಾಲ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ಪ್ರಗತಿ ಕುರಿತು ವಿವರಿಸಿದರು.
ತಾಲೂಕಿನಲ್ಲಿ ರಾಸುಗಳ ಜಾತ್ರೆಗಳು ಪ್ರಾರಂಭಗೊಳ್ಳುತ್ತಿದ್ದು, ರಾಸುಗಳಿಗೆ ಅಗತ್ಯ ಲಸಿಕೆ ಹಾಕುವ ಕುರಿತು ಸದಸ್ಯ ನಾರಾಯಣ್ ಪ್ರಶ್ನಿಸಿದರು. ಅಗತ್ಯ ಲಸಿಕೆ ಹಾಕುವ ಕಾರ್ಯಕ್ರಮ ನಿರಂತರವಾಗಿ ಕೈಗೊಂಡಿದ್ದೇವೆ. ವರದೇನಹಳ್ಳಿ ಹ್ಯಾಂಡ್ ಪೋಸ್ಟ್ನಲ್ಲಿ ಪಂಚಾಯ್ತಿ ನಿವೇಶನ ನೀಡಿದರೆ, ಪಶು ಚಿಕಿತ್ಸಾ ಕೇಂದ್ರದ ಕಟ್ಟಡ ನಿರ್ಮಿಸಿ ರೈತರಿಗೆ ಅನುಕೂಲ ಕಲ್ಪಿಸುವುದಾಗಿ ತಿಳಿಸಿದರು. ಇದಕ್ಕೆ ತಾಪಂ ಇಒ ಟಿ.ಪ್ರದೀಪ್ ಸೂಕ್ತ ನಿವೇಶನ ಗುರುತಿಸಿ ನೀಡಲು ಬಾಚೇನಹಟ್ಟಿ ಪಂಚಾಯ್ತಿ ಪಿಡಿಒಗೆ ಸೂಚಿಸುವುದಾಗಿ ತಿಳಿಸಿದರು.
ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗೆ ಆಯುಷ್ಮಾನ್ ಭಾರತ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಶಾಲಾ ಕೈತೋಟದಲ್ಲಿ ಪಪ್ಪಾಯಿ ಮತ್ತು ನುಗ್ಗೆ ಬೆಳೆಸಲು ಅಗತ್ಯ ಸಸಿಗಳನ್ನು ತೋಟಗಾರಿಕೆಯ ಇಲಾಖೆಯಿಂದ ಸರಬರಾಜು ಮಾಡಲು ಅಗತ್ಯ ಕ್ರಮ ಪಂಚಾಯ್ತಿಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರ್ ಮನವಿ ಮಾಡಿದರು. ಈ ಸಂಬಂಧ ಪತ್ರ ಬರೆಯುವುದಾಗಿ ತಾಪಂ ಇಒ ಟಿ.ಪ್ರದೀಪ್ ತಿಳಿಸಿದರು.
ಸಭೆಯಲ್ಲಿ ಇಲಾಖಾವಾರು ಮಾಹಿತಿ ಪಡೆದರು. ಸದಸ್ಯರಾದ ನಾರಾಯಣಪ್ಪ, ನರಸಿಂಹಮೂರ್ತಿ, ಹನುಮೇಗೌಡ, ಹನುಮಂತರಾಯಪ್ಪ, ಸುಗುಣಾ ಕಾಮ ರಾಜ್, ಗಂಗಮ್ಮ, ದಿವ್ಯರಾಣಿ, ಶಿವಮ್ಮ, ರತ್ನಮ್ಮ, ಸುಧಾ ವಿಜಯಕುಮಾರ್, ತೋಟಗಾರಿಕೆ ಸಹಾಯಕ ನಿರ್ದೇಶಕ ನಾಗರಾಜು, ಕೃಷಿ ಸಹಾಯಕ ನಿರ್ದೆಶಕ ಶಿವಶಂಕರ್, ಅರಣ್ಯ ಇಲಾಖಾಧಿಕಾರಿ ಚಿದಾನಂದ್, ಬಿಸಿಎಂ ಅಧಿಕಾರಿ ನಾಗರಾಜು, ವ್ಯವಸ್ಥಾಪಕ ಸಚ್ಚಿದಾನಂದಮೂರ್ತಿ, ಲೆಕ್ಕಾಧಿಕಾರಿ ಮಂಗಳಮ್ಮ, ನರಸಿಂಹಮೂರ್ತಿ ಇತರರು ಇದ್ದರು.