Advertisement

ಗಡಿ ವಿವಾದ; ಕರ್ನಾಟಕಕ್ಕಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿ ನಿರ್ಣಯ: ಮಹಾರಾಷ್ಟ್ರ ಸಚಿವ

03:03 PM Dec 23, 2022 | Team Udayavani |

ಮುಂಬಯಿ : ಕರ್ನಾಟಕದೊಂದಿಗೆ ಗಡಿ ವಿವಾದದ ಕುರಿತು ಕರ್ನಾಟಕವುವು ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾದ ನಿರ್ಣಯವನ್ನು ಮುಂದಿನ ವಾರ ನಮ್ಮ ರಾಜ್ಯ ಸರಕಾರವು ತರಲಿದೆ ಎಂದು ಮಹಾರಾಷ್ಟ್ರ ಸಚಿವ ಶಂಬುರಾಜ್ ದೇಸಾಯಿ ಶುಕ್ರವಾರ ಹೇಳಿಕೆ ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

Advertisement

ನಾಗ್ಪುರದ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ ಸಚಿವ ದೇಸಾಯಿ, ”ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ಕುರಿತು ರಾಜ್ಯ ಸರಕಾರ ವಿಸ್ತೃತ ನಿರ್ಣಯವನ್ನು ತರಲಿದ್ದು, ಇದು ಕರ್ನಾಟಕ ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಹೆಚ್ಚು ಪರಿಣಾಮಕಾರಿಯಾಗಿರಲಿದೆ. ಸೋಮವಾರ ವಿಧಾನಮಂಡಲದಲ್ಲಿ ಅಂಗೀಕಾರವಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಮಹಾರಾಷ್ಟ್ರ ಮತ್ತು ಕರ್ನಾಟಕ ಮುಖ್ಯಮಂತ್ರಿಗಳ ಸಭೆಯ ನಂತರವೂ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ನಿರ್ಧರಿಸಿದ್ದನ್ನು ಗೌರವಿಸಲಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಬ್ಬರೂ ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತಾರೆ, ”ಎಂದು ಸಚಿವ ದೇಸಾಯಿ ಹೇಳಿದರು.

ರಾಜ್ಯವು ನೇಮಿಸಿದ ಮಹಾರಾಷ್ಟ್ರ-ಕರ್ನಾಟಕ ಗಡಿ ಸಮನ್ವಯ ಸಮಿತಿಯ ಸದಸ್ಯರಾಗಿರುವ ದೇಸಾಯಿ, ಸೋಮವಾರ ಅಂಗೀಕರಿಸುವ ನಿರ್ಣಯವು ಮಹಾರಾಷ್ಟ್ರದ ಪರವಾಗಿ ಹೆಚ್ಚು ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಲಾಗುತ್ತದೆ ಮತ್ತು ಮರಾಠಿ ಜನರ ಹಿತಾಸಕ್ತಿಯಾಗಿದೆ ಎಂದರು.

ನಿರ್ಣಯವನ್ನು ಅಂಗೀಕರಿಸಿದ ನಂತರ, ಮಹಾರಾಷ್ಟ್ರದ ನಾಯಕರನ್ನು ಕರ್ನಾಟಕಕ್ಕೆ ಪ್ರವೇಶಿಸದಂತೆ ತಡೆದಿರುವ ಬಗ್ಗೆ ನಮ್ಮ ತೀವ್ರ ಅಸಮಾಧಾನವನ್ನು ನಾವು ಕೇಂದ್ರ ಗೃಹ ಸಚಿವರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಕುರಿತು ಗುರುವಾರ ಕರ್ನಾಟಕ ವಿಧಾನಸಭೆಯು ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ನೆರೆಯವರಿಗೆ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡಬಾರದು ಎಂದು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತ್ತು. ಮಹಾರಾಷ್ಟ್ರವು ರಚಿಸಿದ ಗಡಿ ವಿವಾದವನ್ನು ಖಂಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next