Advertisement

ಮಹದಾಯಿ ಶೀಘ್ರವೇ ಸರ್ವಪಕ್ಷ ಸಭೆ: ಸಚಿವ ಡಿಕೆಶಿ

06:10 AM Sep 04, 2018 | Team Udayavani |

ಬೆಂಗಳೂರು: ಮಹದಾಯಿ ನ್ಯಾಯ ಮಂಡಳಿಯಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು ಮೇಲ್ಮನವಿ ಸಲ್ಲಿಸುವ ಕುರಿತು ಶೀಘ್ರವೇ ಸರ್ವ ಪಕ್ಷ ಸಭೆ ಕರೆಯುವ ಕುರಿತು ಚಿಂತನೆ ನಡೆದಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆ.6 ಅಥವಾ 10 ರೊಳಗೆ ಮಹದಾಯಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗುವುದು.ನ್ಯಾಯಮಂಡಳಿಯಿಂದ ಆಗಿರುವ ಅನ್ಯಾಯದ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್‌ ಸೇರುತ್ತಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ
ಅವರು, ನಮಗೆ ಕುದುರೆ ವ್ಯಾಪಾರ ಮಾಡುವ ಅವಶ್ಯಕತೆಯಿಲ್ಲ. ನಾವು ಯಾರನ್ನೂ ಸಂಪರ್ಕಿಸಿಲ್ಲ ಎಂದರು.

ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರಮೇಶ್‌ ನಾನು ಆತ್ಮೀಯ ಸ್ನೇಹಿತರು. ಆತ ಆಗಾಗ ತಮಾಷೆ ಮಾಡುತ್ತಿರುತ್ತಾನೆ. ಅವರ ಸಹೋದರರ ಮೇಲೂ ಹೇಳಿಕೆ ನೀಡುತ್ತಿರುತ್ತಾನೆ.
ಅವನ ಸ್ವಭಾವವೇ ಹಾಗೆ. ಅವನ ಪರಿಶ್ರಮದಿಂದ ಕಾಂಗ್ರೆಸ್‌ ಬೆಳಗಾವಿಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next