Advertisement

ಮಹದಾಯಿ ವಿವಾದ: ಜನವರಿ 27 ಕ್ಕೆ ಸರ್ವ ಪಕ್ಷದ ಸಭೆ

06:00 AM Jan 19, 2018 | Team Udayavani |

ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಕುರಿತು ಚರ್ಚಿಸಲು ಜನವರಿ 27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವ ಪಕ್ಷದ ಮುಖಂಡರ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

Advertisement

ಮಹದಾಯಿ ವಿವಾದ ನ್ಯಾಯಮಂಡಳಿಯಲ್ಲಿದ್ದು, ನ್ಯಾಯಮಂಡಳಿ ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಯ ಮೂಲಕ ವಿವಾದ ಬಗೆ ಹರಿಸಿಕೊಳ್ಳುವಂತೆ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರಕ್ಕೆ ರಾಜ್ಯ ಸರ್ಕಾರ ಮೂರು ಬಾರಿ ಪತ್ರ ಬರೆದರೂ, ಗೋವಾ ಸರ್ಕಾರ ಸೂಕ್ತವಾಗಿ ಸ್ಪಂದಿಸದೇ ಇರುವುದರಿಂದ ರಾಜ್ಯದ ಮುಂದಿನ ನಡೆ ಏನಿರಬೇಕು ಎನ್ನುವ ಕುರಿತಂತೆ ಪ್ರತಿಪಕ್ಷಗಳ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ.

ಈಗಾಗಲೇ ಮಹದಾಯಿ ಹೋರಾಟಗಾರರು ಈ ವಿವಾದ ಬಗೆ ಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ರಾಜ್ಯ ಸರ್ಕಾರ ಸರ್ವ ಪಕ್ಷದ ನಿಯೋಗ ತೆಗೆದುಕೊಂಡು ಹೋಗಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸುವ ಕುರಿತಂತೆಯೂ ಜನವರಿ 27 ರಂದು ನಡೆಯುವ ಸಭೆಯಲ್ಲಿ  ಚರ್ಚೆ ನಡೆಯುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next