Advertisement

ಮೂರು ಪಕ್ಷಗಳ ಮಾನ್ಯತೆ ರದ್ದು ಮಾಡಿ; ಆಯೋಗಕ್ಕೆ ರೈತರ ಮನವಿ

02:31 PM Dec 27, 2017 | Team Udayavani |

ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮಾನ್ಯತೆಯನ್ನು ರದ್ದು ಮಾಡಬೇಕೆಂದು ಮಹದಾಯಿ ಹೋರಾಟಗಾರ ರೈತರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದರು.

Advertisement

ಸಾವಿರಾರು ಮಂದಿ ಮಹದಾಯಿ ಹೋರಾಟಗಾರರು ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದರು. ಅಲ್ಲಿಂದ ಚುನಾವಣಾ ಆಯೋಗಕ್ಕೆ ಪಾದಯಾತ್ರೆ ಮೂಲಕ ಹೋಗಿ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಚಾಲುಕ್ಯ ಸರ್ಕಲ್ ಬಳಿ ಸುದ್ದಿಗಾರರ ಜತೆ ಮಾತನಾಡಿದ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್ ಸೊಬರದಮಠ, ಮೂರು ಪಕ್ಷಗಳ ಮಾನ್ಯತೆ ರದ್ದು ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಮನವಿ ಸಲ್ಲಿಸಿದ್ದೇವೆ.

ಸಿಎಂ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ ನಂತರ ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ನಿರ್ಧರಿಸುವುದಾಗಿ ಹೇಳಿದರು. ನಾವು ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದ್ದೇವೆ, ಈ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಂಬ ಆರೋಪ, ಪ್ರತ್ಯಾರೋಗಳಿಗೆಲ್ಲ ಉತ್ತರಿಸೋದಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next