Advertisement

ಮಹದಾಯಿ ಸಮಗ್ರ ಯೋಜನಾ ವರದಿ ಸಿದ್ಧ

07:54 AM May 28, 2020 | Lakshmi GovindaRaj |

ಬೆಳಗಾವಿ: ಮಹದಾಯಿ ಯೋಜನೆ ಅನುಷ್ಠಾನ ವಿಚಾರದಲ್ಲಿ ಸಮಗ್ರ ಯೋಜನಾ  ವರದಿ (ಡಿಪಿಆರ್‌) ಸಿದ್ಧವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಸಚಿವರಜತೆ ಚರ್ಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ  ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾಾರರ ಜತೆ ಮಾತನಾಡಿ, ಇದಕ್ಕೆ ಸಂಬಂಧಪಟ್ಟಂತೆ 800 ಕೋಟಿ ರೂ. ಯೋಜನೆಯ ರೂಪರೇಷೆ ಸಿದ್ಧವಾಗಿದೆ. ಆದಷ್ಟು ಬೇಗ ಇದಕ್ಕೆ  ಚಾಲನೆ ನೀಡಲಾಗುವುದು ಎಂದರು.

Advertisement

ಕೊರೊನಾ  ಲಾಕ್‌ಡೌನ್‌ದಿಂದ ನೀರಾವರಿ  ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮುಖ್ಯಮಂತ್ರಿಗಳು ಸಹ ಇಲಾಖೆ ಅನುದಾನದಲ್ಲಿ ಯಾವುದೇ ಕಡಿತ ಮಾಡಿಲ್ಲ. ಇದರಿಂದ ಬಾಕಿ ಉಳಿದಿರುವ ಯೋಜನೆಗಳನ್ನು ಆದಷ್ಟು ಬೇಗ  ಪೂರ್ಣಗೊಳಿಸಲು ನೆರವಾಗಲಿದೆ ಎಂದರು. ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆ ಇಲ್ಲ.

ಮುಂದಿನ ಬೇಸಿಗೆ ಬರುವಷ್ಟರಲ್ಲಿ ನೀರಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು  ಎಂದು ಹೇಳಿದ ಸಚಿವರು, ಕೃಷ್ಣಾನದಿ ನೀರಿನ ಹಂಚಿಕೆ ಕುರಿತಂತೆ ಮಹಾರಾಷ್ಟ್ರ ಸರಕಾರದ ಜತೆ ಮಾತುಕತೆ ನಡೆಸಬೇಕಿತ್ತು. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡಿರುವ ಕಾರಣ ಮಾತುಕತೆ ವಿಳಂಬವಾಗಿದೆ. ಇದರ ಬಗ್ಗೆ ಶೀಘ್ರವೇ ಚರ್ಚಿಸಿ ನೀರು ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next