Advertisement

ಮಹದಾಯಿ: ಸರ್ವ ಪಕ್ಷ ಸಭೆ ಇಂದು

06:05 AM Nov 17, 2018 | Team Udayavani |

ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಸರ್ವ ಪಕ್ಷಗಳ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯ ಸರ್ಕಾರ ಯೋಜನೆ ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ಹಾಗೂ ಮಹದಾಯಿ ಹೋರಾಟಗಾರ ವಿರೇಶ್‌ ಸೊಬರದಮಠ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದು
ಮನವಿ ಮಾಡಿರುವ ಅವರು, ಮಹದಾಯಿ ನ್ಯಾಯಮಂಡಳಿ ರಾಜ್ಯಕ್ಕೆ ಕುಡಿಯುವ ನೀರಿಗೆ 4 ಟಿಎಂಸಿ,ಮಹದಾಯಿ ವ್ಯಾಪ್ತಿಯ ರೈತರಿಗೆ 1.5 ಟಿಎಂಸಿ ಹಾಗೂ ವಿದ್ಯುತ್‌ ಉತ್ಪಾದನೆಗೆ 8 ಟಿಎಂಸಿ ನೀರು ಬಳಕೆ ಮಾಡಲು ಅವಕಾಶ ಕಲ್ಪಿಸಿದ್ದು, ಆ ನೀರನ್ನು ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಶೀಘ್ರವೇ ಯೋಜನೆ ಆರಂಭಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ ರಾಜ್ಯದ ಹಿತಕ್ಕೆ
ಧಕ್ಕೆಯಾಗದಂತೆ ಹೆಚ್ಚಿನ ನೀರು ಪಡೆಯಲು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next