Advertisement

ಮಹದಾಯಿ ವಿವಾದ: ಎಚ್‌.ಕೆ.ಪಾಟೀಲ್‌ ಪತ್ರ

06:20 AM Nov 17, 2018 | Team Udayavani |

ಬೆಂಗಳೂರು: ಮಹದಾಯಿ ನದಿ ನೀರು ಬಳಕೆ ವಿಚಾರದಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ನೀಡಿರುವುದನ್ನು ಕೇಂದ್ರ ಸರ್ಕಾರ ಮುಚ್ಚಿಟ್ಟು ರಾಜಕೀಯ ಹಸ್ತಕ್ಷೇಪ ಮಾಡಿದೆ ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ್‌, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. 

Advertisement

2003 ರಲ್ಲಿ ಅರಣ್ಯ ಮತ್ತು ಪರಿಸರ ಸಲಹಾ ಸಮಿತಿ ತೆಗೆದುಕೊಂಡ ನಿರ್ಣಯವೇ ಅಂತಿಮವಾಗಿರುವುದರಿಂದ ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ಈ ವಿಷಯವನ್ನು ಮುಚ್ಚಿಟ್ಟು, ಮತ್ತೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಮಂಜೂರಾತಿ ಪಡೆಯಬೇಕೆಂದು ಪ್ರಸ್ತಾಪ ಮಾಡಿರುವುದು ರಾಜ್ಯಕ್ಕೆ ಅನ್ಯಾಯವಾದಂತಾಗಿದೆ.

ಆದರೆ, ಹಿಂದಿನ ನಿಯಮಗಳಂತೆ ಪರಿಸರ ಮತ್ತು ಅರಣ್ಯ ಇಲಾಖೆಯ ಮಂಜೂರಾತಿ ಪಡೆದಿರುವುದನ್ನು ಗಣನೆಗೆ ತೆಗೆದುಕೊಂಡು ಯೋಜನೆಯನ್ನು ಮುಂದುವರೆಸಲು ರಾಜ್ಯ ಸರ್ಕಾರ ರಾಜಕೀಯ ಇಚ್ಛಾ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next