Advertisement

ಮಹದಾಯಿ: ಸರ್ವ ಪಕ್ಷದ ಸಭೆ ಇಂದು 

06:50 AM Jan 27, 2018 | Team Udayavani |

ಬೆಂಗಳೂರು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ವ ಪಕ್ಷ ಮುಖಂಡರ ಸಭೆಯನ್ನು ಶನಿವಾರ ವಿಧಾನಸೌಧದಲ್ಲಿ ಕರೆದಿದ್ದಾರೆ.

Advertisement

ಬೆಳಿಗ್ಗೆ 11ಗಂಟೆಗೆ ಈ ಸಭೆ ನಡೆಯಲಿದ್ದು, ಮಹದಾಯಿ ವಿವಾದದ ಕುರಿತು ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂದು
ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಬಂದ್‌ ನಡೆಸಿದ ಬೆನ್ನಲ್ಲೇ ಹಾಗೂ ಫೆ.4 ರಂದು ಬೆಂಗಳೂರು ಬಂದ್‌ ಗೆ ಕರೆ ನೀಡಿರುವ ಸಂದರ್ಭದಲ್ಲಿ ಕರೆಯಲಾಗಿರುವ ಸರ್ವ ಪಕ್ಷಗಳ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ.

ಗೋವಾ ಸರ್ಕಾರ ಮತ್ತು ಪ್ರತಿಪಕ್ಷದಿಂದ ಮಾತುಕತೆಗೆ ಸರಿಯಾಗಿ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆ
ವಹಿಸುವಂತೆ ಮಹದಾಯಿ ಹಾಗೂ ಕನ್ನಡ ಪರ ಸಂಘಟನೆಗಳ ಹೋರಾಟಗಾರರು ರಾಜ್ಯ ಬಂದ್‌ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ನಡೆಯುವ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ, ರೈತರು ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next