Advertisement

ಮಹಾದೇವ ಭೈರಗೊಂಡ ಹತ್ಯಾಯತ್ನ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

09:23 PM Dec 12, 2020 | mahesh |

ವಿಜಯಪುರ: ನವೆಂಬರ್ 2 ರಂದು ಮಹಾದೇವ ಭೈರಗೊಂಡ ಮೇಲಿನ ಹತ್ಯೆ ಯತ್ನ ಹಾಗೂ ಇನ್ನಿಬ್ಬರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಬಂಧಿತನನ್ನು ಬಸವನಬಾಗೇವಾಡಿ ತಾಲೂಕಿನ‌ ಮನಗೂಳಿ ಗ್ರಾಮದ 26 ವರ್ಷದ ಮುರುಗೇಶ ಸುಭಾಶ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ.

ಬಂಧಿತನಿಂದ ಎರಡು ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ಎಎಸ್ಪಿ ರಾಮ ಅರಸಿದ್ಧಿ ನೇತೃತ್ವದ ಡಿಎಸ್ಪಿ ಲಕ್ಷ್ಮೀನಾರಾಯಣ, ವಿಜಯಪುರ ಗ್ರಾಮೀಣ ವೃತ್ತದ ಸಿಪಿಐ ಸಂಗಮೇಶ ಪಾಲಭಾವಿ, ಜಲನಗರ ಎಸೈ ಆರ್.ಎಸ್. ಜಾನರ ಹಾಗೂ ಇತರೆ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next