Advertisement

ಗುಂಡೇಟಿನಿಂದ ಗಾಯಗೊಂಡ ಮಹಾದೇವ ಭೈರಗೊಂಡ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ

12:42 PM Nov 07, 2020 | keerthan |

ವಿಜಯಪುರ: ವಾರದ ಹಿಂದೆ ಗುಂಡಿನ ದಾಳಿ ಪ್ರಕರಣದಲ್ಲಿ ತೀವ್ರ ಗಾಯಗೊಂಡು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೀಮಾ ತೀರದ ಮಹಾದೇವ ಭೈರಗೊಂಡನನ್ನು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಭದ್ರತೆಯ ಹಿತದೃಷ್ಟಿಯಿಂದ ಹೆಚ್ಚಿನ ಚಿಕಿತ್ಸೆಗೆ ಸ್ಥಳಾಂತರಿಸಿದ ಸ್ಥಳವನ್ನು ಗುಪ್ತವಾಗಿ ಇತಿಸಲಾಗಿದೆ. ಕುಟುಂಬ ಸದಸ್ಯರು ಹೆಚ್ಚಿನ ಚಿಕಿತ್ಸೆ ಹಾಗೂ ಭದ್ರತೆಯ ದೃಷ್ಟಿಯಿಂದ ಬೇರೆ ಕಡೆಗೆ ಮಹಾದೇವ ಭೈರಗೊಂಡ ನನ್ನು ಸ್ಥಳಾಂತರ ಮಾಡಿದ್ದಾರೆ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದರು.

ಚಡಚಣ ತಾಲೂಕು ಕೆರೂರ ಗ್ರಾಮದ ಮಹಾದೇವ ಭೈರಗೊಂಡ ಮೇಲೆ ಸೋಮವಾರ ಮಧ್ಯಾಹ್ನ ಗುಂಡಿ ದಾಳಿ ನಡೆದಿತ್ತು. ಮಹಾದೇವ ಭೈರಗೊಂಡ ಹಾಗೂ ಸಹಚರರು ಖಾಸಗಿ ಭದ್ರತಾ ಸಿಬಂದಿ ಜತೆಗೆ ಮೂರು ಕಾರುಗಳಲ್ಲಿ ಸಂಚರಿಸುತ್ತಿದ್ದಾಗ ಟಿಪ್ಪರ್‌ ಢಿಕ್ಕಿ ಹೊಡೆದು ಅಪಘಾತ ನಡೆಸಿ ಗುಂಡಿನ ದಾಳಿ ಮಾಡಲಾಗಿತ್ತು.

ಇದನ್ನೂ ಓದಿ:ಭೀಮಾ ತೀರದ ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಐವರ ಬಂಧನ

ಮಹಾದೇವ ಭೈರಗೊಂಡನಿಗೆ ಮೂರು ಗುಂಡು ತಾಗಿದ್ದು, ಗಂಭೀರ ಗಾಯಗೊಂಡಿದ್ದಾನೆ. ಮತ್ತೂಂದು ಕಾರಿನಲ್ಲಿದ್ದ ಭೈರಗೊಂಡನ ಮ್ಯಾನೇಜರ್‌ ಬಾಬುರಾಮ್‌ ಮಾರುತಿ ಕಂಚನಾಳ (64) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಲಾಯಿಸುತ್ತಿದ್ದ ಲಕ್ಷ್ಮಣ ಖೋಗಾಂವನ ಕೂಡಾ ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Advertisement

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next