Advertisement

15 ದಿನದಲ್ಲಿ ಮಹದಾಯಿ ನೀರು: ಯಡಿಯೂರಪ್ಪ

07:05 AM Dec 01, 2017 | |

ಆಲಮಟ್ಟಿ: ಹುಬ್ಬಳ್ಳಿ-ಧಾರವಾಡ ಜನತೆಯ ಕುಡಿಯುವ ನೀರಿಗಾಗಿ ಮಹದಾಯಿ ನದಿಯಿಂದ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದ ಮುಖ್ಯಮಂತ್ರಿಗಳ ಮನವೊಲಿಸಿ ಕೇವಲ 15 ದಿನದಲ್ಲಿ 6.5 ಟಿಎಂಸಿ ನೀರು ಪಡೆಯಲು ಬದ್ಧರಾಗಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

Advertisement

ಆಲಮಟ್ಟಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಮಹದಾಯಿ ನೀರಿನ ವಿಚಾರವಾಗಿ ರಾಜ್ಯದ ಕಾಂಗ್ರೆಸ್ಸಿಗರಿಗೆ ಕಾಳಜಿಯಿಲ್ಲ. ಈ ಹಿಂದೆಯೂ ನೀವು ವಿರೋಧ ಪಕ್ಷಗಳ ಮುಖಂಡರನ್ನು ಒಪ್ಪಿಸಿ, ನಾವು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಪ್ಪಿಸುತ್ತೇವೆ ಎಂದು ಹೇಳಿದಾಗ ರಾಜ್ಯ ಸರ್ಕಾರ ಆ ಕೆಲಸವನ್ನು ಮಾಡಲಿಲ್ಲ. ಆದರೆ ನಾನು ಎರಡೂ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯದ ಜನತೆಗೆ ಕುಡಿಯುವ ನೀರಿಗಾಗಿ 6.5 ಟಿಎಂಸಿ ನೀರು ತರುತ್ತೇನೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next