Advertisement

ಮಹದೇವಪುರ: ಕ್ರೇನ್‌ ಹರಿದು ಬಿ.ಕಾಂ.ವಿದ್ಯಾರ್ಥಿನಿ ಸಾವು

10:29 PM Nov 03, 2022 | Team Udayavani |

ಮಹದೇವಪುರ: ಕ್ರೇನ್‌ ವಾಹನ ಹರಿದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ದಾರುಣ ಘಟನೆ ವೈಟ್‌ಫೀಲ್ಡ್ ಸಂಚಾರ ಠಾಣೆ ವ್ಯಾಪ್ತಿಯ ಕನ್ನಮಂಗಲ ಗೈಟ್‌ ಸಮೀಪ ಜರುಗಿದೆ.

Advertisement

ಕನ್ನಮಂಗಲ ಗ್ರಾಮದಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ನೂರ್‌ ಫಿಜ (19) ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದ ನೂರ್‌ ಫಿಜ ಕನ್ನಮಂಗಲ ಬಸ್ಸು ನಿಲ್ದಾಣದಿಂದ ಮನೆಗೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಹಿಂದಿನಿಂದ‌ ಬಂದ ಕ್ರೇನ್‌ ವಾಹನದ ಚಾಲಕನ ಅಜಾಗರೂಕತೆಯಿಂದ ಮೇಲೆ ನೂರ್‌ ಫಿಜ ದೇಹದ ಮೇಲೆ ಹರಿದಿದೆ. ಘಟನೆ ಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೂರ್‌ ಫಿಜ ಅವ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದಾರೆ.

ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಕ್ರೇನ್‌ ವಾಹನ ಹರಿದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕನ್ನಮಂಗಲ ಗ್ರಾಮದ ಕ್ರೇನ್‌ ವಾಹನವನ್ನು ಜಪ್ತಿ ಮಾಡಲಾಗಿದ್ದು, ಚಾಲಕನನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next