Advertisement

ಬಿಜೆಪಿ ನೇತೃತ್ವದ ಎನ್‌ಡಿಎ ಮಹಾಘಟಬಂಧನದೆದುರು ಧೂಳಿಪಟ: ಶತ್ರುಘ್ನ ಸಿನ್ಹಾ

09:46 AM May 18, 2019 | Team Udayavani |

ಪಟ್ನಾ : ಮೋದಿ ಅಲೆ (ಲೆಹರ್‌) ಕಳೆದ ಐದು ವರ್ಷಗಳಲ್ಲಿ ದುರಂತವಾಗಿ (ಕಹರ್‌) ಪರಿಣಮಿಸಿದೆ; ಬಿಹಾರದಲ್ಲಿ ಮಹಾಘಟಬಂಧನವು ಬಿಜೆಪಿ ನೇತೃತ್ವದ ಎನ್‌ಡಿಎ ಯನ್ನು ಧೂಳೀಪಟ ಮಾಡಲಿದೆ ಎಂದು ರಾಜಕಾರಣಿಯಾಗಿ ಪರಿವರ್ತಿತ ನಟ ಶತ್ರುಘ್ನ ಸಿನ್ಹಾ ಇಂದು ಶುಕ್ರವಾರ ಹೇಳಿದ್ದಾರೆ.

Advertisement

ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟದೆದುರು ಕಾಂಗ್ರೆಸ್‌ ಪ್ರತ್ಯೇಕವಾಗಿ ಹೋರಾಡುತ್ತಿರುವ ಹೊರತಾಗಿಯೂ ನೆರೆಯ ಉತ್ತರ ಪ್ರದೇಶದಲ್ಲಿ ಕೂಡ ಬಿಜೆಪಿ ಧೂಳೀಪಟವಾಗಲಿದೆ ಎಂದು ಶತ್ರುಘ್ನಸಿನ್ಹಾ ಹೇಳಿದರು.

ಉತ್ತರ ಪ್ರದೇಶದಲ್ಲಿ ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿಯಾಗಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ.

ಬಿಹಾರದ ಪಟ್ನಾ ಸಾಹಿಬ್‌ ಕ್ಷೇತ್ರದಿಂದ ಶತ್ರುಘ್ನ ಸಿನ್ಹಾ ಅವರು ಕಾಂಗ್ರೆಸ್‌ ಟಿಕೆಟ್‌ ನಿಂದ ಸ್ಪರ್ಧಿಸುತ್ತಿದ್ದಾರೆ. ಇವರ ಎದುರು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ, ರವಿಶಂಕರ್‌ ಪ್ರಸಾದ್‌ ಸ್ಪರ್ಧಿಸುತ್ತಿದ್ದಾರೆ. ಮೇ 19ರ ಭಾನುವಾರ ಇಲ್ಲಿ ಮತದಾನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next