ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟ, ಬೆಂಗಳೂರು ನೀಡುವ ಈ ವರ್ಷದ “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’ಗೆ ಜೈನ ಸಾಹಿತಿ – ಕವಯಿತ್ರಿ ವೀಣಾ ಬಿ.ರಘುಚಂದ್ರ ಶೆಟ್ಟಿ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ.
Advertisement
ಬೆಂಗಳೂರಿನ ಬಸವನಗುಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜ.26ರಂದು ನಡೆಯುವ ಮೈತ್ರಿ ಕೂಟದ ವಾರ್ಷಿಕೋತ್ಸವದಂದು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಮೈತ್ರಿ ಕೂಟದ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.