Advertisement

Mahalaxmi Case: ಉಸಿರುಗಟ್ಟಿಸಿ ಕೊಂದ ಬಳಿಕ 59 ತುಂಡು ಮಾಡಿದ್ದ ಹಂತಕ!

12:18 PM Oct 13, 2024 | Team Udayavani |

ಬೆಂಗಳೂರು: ಇತ್ತೀಚೆಗೆ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ಮೃತದೇಹವನ್ನು 59 ತುಂಡು ಮಾಡಿ, ಫ್ರಿಡ್ಜ್ ನಲ್ಲಿ ಇಟ್ಟಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಯ ವರದಿಯು ಪೊಲೀಸರ ಕೈ ಸೇರಿದ್ದು, ನೇಪಾಳ ಮೂಲದ ಮಹಾಲಕ್ಷ್ಮೀ ಅವರನ್ನು ಮೊದಲು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿ ಮುಕ್ತಿ ರಂಜನ್‌ ರಾಯ್, ಬಳಿಕ ದೇಹವನ್ನು ಪೀಸ್‌, ಪೀಸ್‌ ಮಾಡಿ ಫ್ರಿಡ್ಜ್ನಲ್ಲಿ ಇಟ್ಟಿರುವು ಗೊತ್ತಾಗಿದೆ.

Advertisement

ಮಹಾಲಕ್ಷ್ಮೀ ಅವರನ್ನು ದಿಂಬಿ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ನಂತರ ಮೃತದೇಹವನ್ನು 59 ತುಂಡು ಮಾಡಿ ಫ್ರಿಡ್ಜ್ನಲ್ಲಿ ಇಟ್ಟಿದ್ದರಿಂದ ಕೊಲೆಯ ನಿಖರವಾದ ದಿನಾಂಕ ಹಾಗೂ ಸಮ ಯವು ಪತ್ತೆಯಾಗಿಲ್ಲ. ಮಹಾಲಕ್ಷ್ಮೀಯನ್ನು ಸಾಯಿಸಿದ ಆರೋಪಿ ಮುಕ್ತಿ ರಂಜನ್‌ ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ನ್ಯಾಯಾಲಯಕ್ಕೆ ಅಬೇಟೆಡ್‌ ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.

ಆರೋಪಿ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ಮುಕ್ತಾಯಗೊಳಿಸುವಂತೆ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next