Advertisement

ಸಿಂಧುದುರ್ಗ: ಪ್ರವಾಸಿಗರ ದೋಣಿ ಮುಳುಗಿ ಇಬ್ಬರ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ

07:17 PM May 24, 2022 | Team Udayavani |

ಮುಂಬಯಿ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಮಾಲ್ವಾನ್‌ ತರ್ಕರ್ಲಿ ಎಂಬಲ್ಲಿ ಮಂಗಳವಾರ (ಮೇ 24) ಪ್ರವಾಸಿಗರ ದೋಣಿ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ದೋಣಿಯಲ್ಲಿ ಸುಮಾರು 20 ಪ್ರವಾಸಿಗರಿದ್ದು, ಅವರಲ್ಲಿ 16 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೋಣಿ ಮುಳುಗುವುದನ್ನು ಕಂಡ ಸ್ಥಳೀಯರು ತತ್‌ಕ್ಷಣ ರಕ್ಷಣೆಗೆ ಮುಂದಾಗಿದ್ದಾರೆ ದೋಣಿಯಲ್ಲಿದ್ದ ಎಲ್ಲರೂ ಸ್ಕೂಬಾ ಡೈವಿಂಗ್‌ ಮುಗಿಸಿ ಹಿಂತಿರುಗುತ್ತಿದ್ದಾಗ ದೋಣಿ ಅಪಘಾತಕ್ಕೀಡಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿ ಮುಳುಗಿದ ವಿಚಾರ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪ್ರವಾಸಿಗರನ್ನು ನೀರಿನಿಂದ ಹೊರತೆಗೆದಿದ್ದಾರೆ.

ಇದನ್ನೂ ಓದಿ:ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ಭೂಮಿ ಹದ ಗೊಳಿಸಿ ಸಜ್ಜು ಗೊಳ್ಳಿಸಿದ ರೈತ

ಮೃತರು ಅಕೋಲಾ ಮತ್ತು ಪುಣೆ ಮೂಲದವರು ಎಂದು ತಿಳಿದುಬಂದಿದೆ.

Advertisement

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಮಾವಲ್‌ ಗ್ರಾಮಾಂತರ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next